ಇಲ್ಲಿನ ಕಾಳಿಕಾ ದೇವಿ ದೇಗುಲದ ಬೆಳಿಗ್ಗೆ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕರಿಸಿದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಕೆಲ ಮಹಿಳೆಯರು ಕೈಯಲ್ಲಿ ಆರತಿ ತಟ್ಟೆ ಹಿಡಿದುಕೊಂಡರೆ, ಕೆಲವರು ತಲೆ ಮೇಲೆ ಕಲಶಹೊತ್ತು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಂಗಳವಾದ್ಯ ಮೊಳಗಿತು. ಮಹಾತ್ಮ ಗಾಂಧಿ ವೃತ್ತ, ಬಸ್ ನಿಲ್ದಾಣ, ಕಾಲೇಜು ರಸ್ತೆ, ಮೇನ್ ಬಜಾರ್ ಮೂಲಕ ಹಾದು ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದಲ್ಲಿ ಮೆರವಣಿಗೆ ಕೊನೆಗೊಂಡಿತು.