<p><strong>ಸಂಡೂರು</strong>: ತಾಲ್ಲೂಕಿನ ತೋರಣಗಲ್ಲು ಹೋಬಳಿಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಎಂ.ಗಂಗಲಾಪುರ, ವಿಠಲಾಪುರ ಗ್ರಾಮಗಳ ಹಳ್ಳಗಳು ತುಂಬಿ ಹರಿದಿವೆ. ವಿಠಲಾಪುರ ಗ್ರಾಮದ ಕೆರೆ ಕೋಡಿ ಬಿದ್ದಿದೆ.</p>.<p>ಕುರೆಕುಪ್ಪ, ವಡ್ಡು, ಬನ್ನಿಹಟ್ಟಿ, ತೋರಣಗಲ್ಲು, ವಿಠಲಾಪುರ, ಮೆಟ್ರಿಕಿ, ಯು.ರಾಜಾಪುರ, ಡಿ.ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಕುರೆಕುಪ್ಪ ಪಟ್ಟಣದಲ್ಲಿ 8.6 ಸೆಂ.ಮೀ, ವಿಠಲಾಪುರ ಗ್ರಾಮದಲ್ಲಿ 8.8 ಸೆಂ.ಮೀ ಮಳೆ ವರದಿಯಾಗಿದೆ.</p>.<p>ವಿಠಲಾಪುರ ಗ್ರಾಮದ ರೈತ ಹಾಲಪ್ಪ ಅವರ ಜಮೀನಿಗೆ ಮಳೆ ನೀರು ನುಗ್ಗಿ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ವಿಠಲಾಪುರ ಗ್ರಾಮದ ಕೆಲ ರೈತರ ಜಮೀನುಗಳಲ್ಲಿನ ಶೇಂಗಾ ಬೆಳೆ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ.</p>.<p>ಕಳೆದ ಒಂದು ವಾರದಿಂದ ಬಿಸಿಲಿನ ವಾತಾವರಣವಿತ್ತು. ಬುಧವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹತ್ತಿ, ಜೋಳ, ಶೇಂಗಾ, ನವಣೆ ಸೇರಿದಂತೆ ಇತರೆ ಮಳೆಯಾಶ್ರಿತ ಬೆಳೆಗಳಿಗೆ ಅನುಕೂಲ ಆಗಿದ್ದು, ಗ್ರಾಮೀಣ ಭಾಗದ ರೈತರು ಸಂತಸಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ತಾಲ್ಲೂಕಿನ ತೋರಣಗಲ್ಲು ಹೋಬಳಿಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಎಂ.ಗಂಗಲಾಪುರ, ವಿಠಲಾಪುರ ಗ್ರಾಮಗಳ ಹಳ್ಳಗಳು ತುಂಬಿ ಹರಿದಿವೆ. ವಿಠಲಾಪುರ ಗ್ರಾಮದ ಕೆರೆ ಕೋಡಿ ಬಿದ್ದಿದೆ.</p>.<p>ಕುರೆಕುಪ್ಪ, ವಡ್ಡು, ಬನ್ನಿಹಟ್ಟಿ, ತೋರಣಗಲ್ಲು, ವಿಠಲಾಪುರ, ಮೆಟ್ರಿಕಿ, ಯು.ರಾಜಾಪುರ, ಡಿ.ಅಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಕುರೆಕುಪ್ಪ ಪಟ್ಟಣದಲ್ಲಿ 8.6 ಸೆಂ.ಮೀ, ವಿಠಲಾಪುರ ಗ್ರಾಮದಲ್ಲಿ 8.8 ಸೆಂ.ಮೀ ಮಳೆ ವರದಿಯಾಗಿದೆ.</p>.<p>ವಿಠಲಾಪುರ ಗ್ರಾಮದ ರೈತ ಹಾಲಪ್ಪ ಅವರ ಜಮೀನಿಗೆ ಮಳೆ ನೀರು ನುಗ್ಗಿ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ವಿಠಲಾಪುರ ಗ್ರಾಮದ ಕೆಲ ರೈತರ ಜಮೀನುಗಳಲ್ಲಿನ ಶೇಂಗಾ ಬೆಳೆ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ.</p>.<p>ಕಳೆದ ಒಂದು ವಾರದಿಂದ ಬಿಸಿಲಿನ ವಾತಾವರಣವಿತ್ತು. ಬುಧವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹತ್ತಿ, ಜೋಳ, ಶೇಂಗಾ, ನವಣೆ ಸೇರಿದಂತೆ ಇತರೆ ಮಳೆಯಾಶ್ರಿತ ಬೆಳೆಗಳಿಗೆ ಅನುಕೂಲ ಆಗಿದ್ದು, ಗ್ರಾಮೀಣ ಭಾಗದ ರೈತರು ಸಂತಸಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>