ಮೊದಲು ನಗರದ ರಾಣಿಪೇಟೆಗೆ ತೆರಳಿ ಸ್ಥಳೀಯರ ಆರೋಗ್ಯ ವಿಚಾರಿಸಿದರು. ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರಿನ ಪೂರೈಕೆಯಾಗುತ್ತಿದೆಯೇ? ಆರೋಗ್ಯ ಇಲಾಖೆಯವರು ಎಲ್ಲ ರೀತಿಯ ಚಿಕಿತ್ಸೆ, ಔಷಧ ನೀಡುತ್ತಿದ್ದಾರೆಯೇ? ತಾತ್ಕಾಲಿಕವಾಗಿ ತೆಗೆದಿರುವ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಇರುತ್ತಾರೆಯೇ? ರೋಗಿಗಳು ಹೋದರೆ ಉಪಚಾರ ಮಾಡುತ್ತಾರೆಯೇ? ಹೀಗೆ ಸಾಲು ಸಾಲು ಪ್ರಶ್ನೆಗಳನ್ನು ಜನರಿಗೆ ಕೇಳಿ ಮಾಹಿತಿ ಪಡೆದರು.