ಜಿಲ್ಲೆಯಲ್ಲಿ ಸಮಪರ್ಕವಾಗಿ ಮಳೆಯಾಗದೆ ಬರಗಾಲ ಉದ್ಭವಿಸಿರುವುದರಿಂದ, ತುಂಗಭದ್ರಾ ನದಿಯಲ್ಲಿ ನೀರು ಬತ್ತಿ ಹೋಗಿರುತ್ತದೆ. ಸಿರುಗುಪ್ಪ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕುಡಿಯುವ ನೀರಿನ ಕೆರೆಯಲ್ಲಿಯೂ ನೀರಿನ ಸಂಗ್ರಹಣೆ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ಸಿರುಗುಪ್ಪ ನಗರಕ್ಕೆ ಭೀಕರ ಕುಡಿಯುವ ನೀರಿನ ಅಭಾವ ಉಂಟಾಗುವ ಸಂಭವವಿರುತ್ತದೆ. ಹೀಗಾಗಿ ಇದಕ್ಕೂ ಮುನ್ನ ಸಿರುಗುಪ್ಪ ನಗರ ವ್ಯಾಪ್ತಿಯಲ್ಲಿ ಕೆರೆಯಲ್ಲಿರುವ ನೀರನ್ನು 5 ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತಿತ್ತು. ಬರುವ ಏ. 2ರಿಂದ ಕೆರೆಯ ನೀರನ್ನು 5 ದಿನಗಳ ಬದಲಾಗಿ 8 ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತ್ತದೆ. ಮುಂದೆ ಎದುರಾಗಬಹುದಾದ ಭೀಕರ ಕುಡಿಯುವ ನೀರಿನ ಅಭಾವವನ್ನು ನೀಗಿಸುವ ಹಿತದೃಷ್ಟಿಯಿಂದ ನಗರಸಭೆಯು ಈ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.