<p><strong>ಸಂಡೂರು:</strong> ‘ಪಟ್ಟಣದಲ್ಲಿನ ಎಲ್ಲ ಅಂಗವಿಕಲರ ಸಾಮಾಜಿಕ, ಆರ್ಥಿಕ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುವುದರ ಜೊತೆಗೆ ಅವರು ಆರ್ಥಿಕ ಸ್ವಾವಲಂಬನೆ ಹೊಂದಲು ಪುರಸಭೆ ಅಧಿಕಾರಿಗಳು ಅನೇಕ ಆರ್ಥಿಕ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಶಾಸಕಿ ಅನ್ನಪೂರ್ಣ ತುಕಾರಾಂ ಹೇಳಿದರು.</p>.<p>ಪಟ್ಟಣದ ಪುರಸಭೆಯ ಆವರಣದಲ್ಲಿ ಮಂಗಳವಾರ ಪುರಸಭೆಯ ಎಸ್ಎಫ್ಸಿ ಯೋಜನೆಯ ಅನುದಾನದಲ್ಲಿ ₹10.80 ಲಕ್ಷ ವೆಚ್ಚದಲ್ಲಿ ಖರೀದಿಸಿದ ಎಂಟು ಜನ ಅಂಗವಿಕಲರಿಗೆ ದ್ವಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪಟ್ಟಣದ ವಿವಿಧ ಸಮುದಾಯಗಳ ಜನರ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಪುರಸಭೆಯು ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಬೇಕು. ಪಟ್ಟಣದಲ್ಲಿ ಸುಂದರ, ಸ್ವಚ್ಛ ಹಸಿರಿನ ಪರಿಸರಕ್ಕಾಗಿ ಎಲ್ಲ ಜನರ ಸಹಕಾರ ಅಗತ್ಯವಾಗಿದೆ’ ಎಂದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನ, ವಾಲ್ಮೀಕಿ ಭವನಗಳಿಗೆ ಪುರಸಭೆಯ ಎಸ್ಎಫ್ಸಿ ಅನುದಾನದಲ್ಲಿ ₹19.79 ಲಕ್ಷ ವೆಚ್ಚದ ಕುರ್ಚಿಗಳು, ಟೇಬಲ್, ಧ್ವನಿವರ್ಧಕಗಳನ್ನು ವಿತರಿಸಿದರು.</p>.<p>ಪುರಸಭೆಯ ಅಧ್ಯಕ್ಷ ಸಿರಾಜ್ ಹುಸೇನ್, ಉಪಾಧ್ಯಕ್ಷೆ ಎಂ.ಸಿ.ಲತಾ, ಪುರಸಭೆಯ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ವೆಂಕಟೇಶ್, ಮುಖ್ಯಾಧಿಕಾರಿ ಕೆ.ಜಯಣ್ಣ, ಅಧಿಕಾರಿಗಳು, ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ‘ಪಟ್ಟಣದಲ್ಲಿನ ಎಲ್ಲ ಅಂಗವಿಕಲರ ಸಾಮಾಜಿಕ, ಆರ್ಥಿಕ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುವುದರ ಜೊತೆಗೆ ಅವರು ಆರ್ಥಿಕ ಸ್ವಾವಲಂಬನೆ ಹೊಂದಲು ಪುರಸಭೆ ಅಧಿಕಾರಿಗಳು ಅನೇಕ ಆರ್ಥಿಕ ಯೋಜನೆಗಳನ್ನು ಜಾರಿಗೆ ತರಬೇಕು’ ಎಂದು ಶಾಸಕಿ ಅನ್ನಪೂರ್ಣ ತುಕಾರಾಂ ಹೇಳಿದರು.</p>.<p>ಪಟ್ಟಣದ ಪುರಸಭೆಯ ಆವರಣದಲ್ಲಿ ಮಂಗಳವಾರ ಪುರಸಭೆಯ ಎಸ್ಎಫ್ಸಿ ಯೋಜನೆಯ ಅನುದಾನದಲ್ಲಿ ₹10.80 ಲಕ್ಷ ವೆಚ್ಚದಲ್ಲಿ ಖರೀದಿಸಿದ ಎಂಟು ಜನ ಅಂಗವಿಕಲರಿಗೆ ದ್ವಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಪಟ್ಟಣದ ವಿವಿಧ ಸಮುದಾಯಗಳ ಜನರ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಪುರಸಭೆಯು ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಬೇಕು. ಪಟ್ಟಣದಲ್ಲಿ ಸುಂದರ, ಸ್ವಚ್ಛ ಹಸಿರಿನ ಪರಿಸರಕ್ಕಾಗಿ ಎಲ್ಲ ಜನರ ಸಹಕಾರ ಅಗತ್ಯವಾಗಿದೆ’ ಎಂದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನ, ವಾಲ್ಮೀಕಿ ಭವನಗಳಿಗೆ ಪುರಸಭೆಯ ಎಸ್ಎಫ್ಸಿ ಅನುದಾನದಲ್ಲಿ ₹19.79 ಲಕ್ಷ ವೆಚ್ಚದ ಕುರ್ಚಿಗಳು, ಟೇಬಲ್, ಧ್ವನಿವರ್ಧಕಗಳನ್ನು ವಿತರಿಸಿದರು.</p>.<p>ಪುರಸಭೆಯ ಅಧ್ಯಕ್ಷ ಸಿರಾಜ್ ಹುಸೇನ್, ಉಪಾಧ್ಯಕ್ಷೆ ಎಂ.ಸಿ.ಲತಾ, ಪುರಸಭೆಯ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ವೆಂಕಟೇಶ್, ಮುಖ್ಯಾಧಿಕಾರಿ ಕೆ.ಜಯಣ್ಣ, ಅಧಿಕಾರಿಗಳು, ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>