<p><strong>ತೆಕ್ಕಲಕೋಟೆ</strong>: ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕೋಟ್ಯಾಂತರ ವೆಚ್ಚದ ಕಟ್ಟಡ ಕಾಮಗಾರಿ ಪೂರ್ಣಗೊಂಡು ಎಂಟರಿಂದ ಹತ್ತು ತಿಂಗಳು ಕಳೆದಿದೆ. ಆದರೂ ವಸತಿ ನಿಲಯ ಇನ್ನೂ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿದೆ. </p>.<p>ಪಟ್ಟಣದ 1ನೇ ವಾರ್ಡಿನ ಗೊರವರ ಓಣಿಯಲ್ಲಿನ ಖಾಸಗಿ ಕಟ್ಟಡದಲ್ಲಿ ಮಾಸಿಕ ₹69 ಸಾವಿರ ಅಂದರೆ ವಾರ್ಷಿಕ ₹8.48 ಲಕ್ಷ ಬಾಡಿಗೆ ಆಧಾರದ ಮೇಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯ ನಡೆಯುತ್ತಿದೆ.</p>.<p>ವಸತಿ ನಿಲಯದಲ್ಲಿ ಉಪ್ಪಾರ ಹೊಸಳ್ಳಿ, ಬಲಕುಂದಿ, ಬಂಡ್ರಾಳ್, ಗೋನಾಳು, ಸಿರಿಗೇರಿಕ್ರಾಸ್, ಕೂರಿಗನೂರು, ಸಿರುಗುಪ್ಪ, ಮೋಕ, ದಡೇಸೂಗೂರು ಸೇರಿದಂತೆ ಗ್ರಾಮೀಣ, ನಗರ ಪ್ರದೇಶಗಳ ವಿದ್ಯಾರ್ಥಿನಿಯರು ಇದ್ದಾರೆ. ಪಿಯುಸಿ, ಪದವಿ, ಡಿಪ್ಲೋಮ ಅಲ್ಲದೆ ಡಿಇಡಿ ವ್ಯಾಸಂಗ ಮಾಡುತ್ತಿರುವ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ. </p>.<p>ಈಗಿರುವ ಬಾಲಕಿಯರ ವಸತಿ ನಿಲಯದಲ್ಲಿ 90 ವಿದ್ಯಾರ್ಥಿನಿಯರಿಗೆ ಅವಕಾಶ ಇದೆ. ಆದರೆ ಇಲ್ಲಿ 105ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ. ಮಕ್ಕಳಿಗೆ ಹಾಸ್ಟಲ್ ವ್ಯವಸ್ಥೆ ಸಿಗದೆ ವಾಪಾಸ್ಸು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಹಲವಾರು ವಿದ್ಯಾರ್ಥಿನಿಯರು ವಸತಿ ನಿಲಯದ ಸೌಲಭ್ಯವಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.</p>.<p><strong>ಪಾಳುಬಿದ್ದ ಹೊಸ ಕಟ್ಟಡ:</strong> ಪಟ್ಟಣದ ಜೆಸ್ಕಾಂ ಕಚೇರಿ ಹಿಂಭಾಗದ ಕರ್ನಾಟಕ ಗೃಹ ಮಂಡಳಿಯ ಕಾಲೋನಿ (ಸಿ. ಎ. ನಿವೇಶನ)ಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ₹2.70 ಕೋಟಿ ವೆಚ್ಚದ ಕಾಮಗಾರಿಯನ್ನು 2022ರಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಆರಂಭಸಿತ್ತು.</p>.<p>ಕಟ್ಟಡ ಈ ವರ್ಷದ ಜನವರಿಯಲ್ಲಿ ಹಸ್ತಾಂತರಗೊಳ್ಳುತ್ತದೆ ಎನ್ನಲಾಗಿತ್ತು. ಆದರೆ, ಈ ವರೆಗೆ ಆಗಿಲ್ಲ. ಕಟ್ಟಡದಲ್ಲಿ ಯಾವುದೇ ಸಣ್ಣ ಪುಟ್ಟ ಕೆಲಸಗಳೂ ಆಗುತ್ತಿಲ್ಲ. ಕಟ್ಟಡ ಕಾಮಗಾರಿ ಮುಗಿದಿದ್ದರೂ ಎಲ್ಲೆಂದರಲ್ಲಿ ಅಳಿದುಳಿದ ಸಾಮಗ್ರಿ ಹಾಕಿ ಗೋದಾಮು ಮಾಡಲಾಗಿದೆ. ಕಟ್ಟಡದ ಮೇಲ್ಭಾಗದ ನೀರಿನ ಟ್ಯಾಂಕ್ಗಳು ಗಾಳಿಗೆ ಹಾರಿ ಹೋಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ನಿಲಯದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ, ಸ್ನಾನಗೃಹ ಇಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿದ್ಯಾರ್ಥಿನಿಯರು ದೂರಿದರು.</p>.<div><blockquote>ಕಟ್ಟಡದಲ್ಲಿ ಇನ್ನೂ ಸಣ್ಣ ಪುಟ್ಟ ಕೆಲಸಗಳು ಬಾಕಿ ಇದೆ. ಕಾಮಗಾರಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್)ಗೆ ಪತ್ರ ಬರೆಯಲಾಗಿದೆ</blockquote><span class="attribution"> – ಜಲಾಲಪ್ಪ ಸಹಾಯಕ ನಿರ್ದೇಶಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕೋಟ್ಯಾಂತರ ವೆಚ್ಚದ ಕಟ್ಟಡ ಕಾಮಗಾರಿ ಪೂರ್ಣಗೊಂಡು ಎಂಟರಿಂದ ಹತ್ತು ತಿಂಗಳು ಕಳೆದಿದೆ. ಆದರೂ ವಸತಿ ನಿಲಯ ಇನ್ನೂ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿದೆ. </p>.<p>ಪಟ್ಟಣದ 1ನೇ ವಾರ್ಡಿನ ಗೊರವರ ಓಣಿಯಲ್ಲಿನ ಖಾಸಗಿ ಕಟ್ಟಡದಲ್ಲಿ ಮಾಸಿಕ ₹69 ಸಾವಿರ ಅಂದರೆ ವಾರ್ಷಿಕ ₹8.48 ಲಕ್ಷ ಬಾಡಿಗೆ ಆಧಾರದ ಮೇಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯ ನಡೆಯುತ್ತಿದೆ.</p>.<p>ವಸತಿ ನಿಲಯದಲ್ಲಿ ಉಪ್ಪಾರ ಹೊಸಳ್ಳಿ, ಬಲಕುಂದಿ, ಬಂಡ್ರಾಳ್, ಗೋನಾಳು, ಸಿರಿಗೇರಿಕ್ರಾಸ್, ಕೂರಿಗನೂರು, ಸಿರುಗುಪ್ಪ, ಮೋಕ, ದಡೇಸೂಗೂರು ಸೇರಿದಂತೆ ಗ್ರಾಮೀಣ, ನಗರ ಪ್ರದೇಶಗಳ ವಿದ್ಯಾರ್ಥಿನಿಯರು ಇದ್ದಾರೆ. ಪಿಯುಸಿ, ಪದವಿ, ಡಿಪ್ಲೋಮ ಅಲ್ಲದೆ ಡಿಇಡಿ ವ್ಯಾಸಂಗ ಮಾಡುತ್ತಿರುವ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ. </p>.<p>ಈಗಿರುವ ಬಾಲಕಿಯರ ವಸತಿ ನಿಲಯದಲ್ಲಿ 90 ವಿದ್ಯಾರ್ಥಿನಿಯರಿಗೆ ಅವಕಾಶ ಇದೆ. ಆದರೆ ಇಲ್ಲಿ 105ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ. ಮಕ್ಕಳಿಗೆ ಹಾಸ್ಟಲ್ ವ್ಯವಸ್ಥೆ ಸಿಗದೆ ವಾಪಾಸ್ಸು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಹಲವಾರು ವಿದ್ಯಾರ್ಥಿನಿಯರು ವಸತಿ ನಿಲಯದ ಸೌಲಭ್ಯವಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.</p>.<p><strong>ಪಾಳುಬಿದ್ದ ಹೊಸ ಕಟ್ಟಡ:</strong> ಪಟ್ಟಣದ ಜೆಸ್ಕಾಂ ಕಚೇರಿ ಹಿಂಭಾಗದ ಕರ್ನಾಟಕ ಗೃಹ ಮಂಡಳಿಯ ಕಾಲೋನಿ (ಸಿ. ಎ. ನಿವೇಶನ)ಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ₹2.70 ಕೋಟಿ ವೆಚ್ಚದ ಕಾಮಗಾರಿಯನ್ನು 2022ರಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಆರಂಭಸಿತ್ತು.</p>.<p>ಕಟ್ಟಡ ಈ ವರ್ಷದ ಜನವರಿಯಲ್ಲಿ ಹಸ್ತಾಂತರಗೊಳ್ಳುತ್ತದೆ ಎನ್ನಲಾಗಿತ್ತು. ಆದರೆ, ಈ ವರೆಗೆ ಆಗಿಲ್ಲ. ಕಟ್ಟಡದಲ್ಲಿ ಯಾವುದೇ ಸಣ್ಣ ಪುಟ್ಟ ಕೆಲಸಗಳೂ ಆಗುತ್ತಿಲ್ಲ. ಕಟ್ಟಡ ಕಾಮಗಾರಿ ಮುಗಿದಿದ್ದರೂ ಎಲ್ಲೆಂದರಲ್ಲಿ ಅಳಿದುಳಿದ ಸಾಮಗ್ರಿ ಹಾಕಿ ಗೋದಾಮು ಮಾಡಲಾಗಿದೆ. ಕಟ್ಟಡದ ಮೇಲ್ಭಾಗದ ನೀರಿನ ಟ್ಯಾಂಕ್ಗಳು ಗಾಳಿಗೆ ಹಾರಿ ಹೋಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ನಿಲಯದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ, ಸ್ನಾನಗೃಹ ಇಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿದ್ಯಾರ್ಥಿನಿಯರು ದೂರಿದರು.</p>.<div><blockquote>ಕಟ್ಟಡದಲ್ಲಿ ಇನ್ನೂ ಸಣ್ಣ ಪುಟ್ಟ ಕೆಲಸಗಳು ಬಾಕಿ ಇದೆ. ಕಾಮಗಾರಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್)ಗೆ ಪತ್ರ ಬರೆಯಲಾಗಿದೆ</blockquote><span class="attribution"> – ಜಲಾಲಪ್ಪ ಸಹಾಯಕ ನಿರ್ದೇಶಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>