ಚುನಾವಣೆ ಸೋಲಿನ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ‘ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರು ಕೂಡ ನನ್ನ ಮೇಲೆ ನಂಬಿಕೆ ಇರಿಸಿ, ಮತದಾನ ಮಾಡಿದ ಬಳ್ಳಾರಿ–ವಿಜಯನಗರ ಲೋಕಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಚುನಾವಣೆಯಲ್ಲಿ ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯುವುದಿಲ್ಲ. ನಿರಂತರವಾಗಿ ನಿಮ್ಮ ಸೇವೆ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.