ಸಂಡೂರು: ಪ್ರತಿಯೊಬ್ಬರೂ ಧರ್ಮದಲ್ಲಿ ನಂಬಿಕೆ ಇರಿಸಬೇಕು. ಆಗ ಮಾತ್ರ ಜೀವನದಲ್ಲಿ ಏಳಿಗೆ ಕಾಣಲು ಸಾಧ್ಯ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ತಿಳಿಸಿದರು.
ತಾಲ್ಲೂಕಿನ ಚೋರನೂರು ಗ್ರಾಮದಲ್ಲಿ ನಡೆದ ಹರಕೆ ವೀರಭದ್ರೇಶ್ವರ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ ,ನೂತನ ದೇವಾಲಯ ಉದ್ಘಾಟನೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಭಾವೈಕ್ಯತೆಯಿಂದ ಬಾಳಿದಾಗ ಮನುಷ್ಯನು ಶಾಂತಿ, ನೆಮ್ಮದಿ ಪಡೆಯಬಹುದು. ‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎನ್ನುವ ರಂಭಾಪುರಿ ಪೀಠದ ಘೋಷವಾಕ್ಯವು ವಿಶ್ವಶಾಂತಿಯನ್ನು ಬಯಸಿದೆ ಎಂದರು.