<p><strong>ಹೊಸಪೇಟೆ (ವಿಜಯನಗರ):</strong> ಹಂಪಿಯ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಎರಡು ದಿನಗಳ ನಂತರ ಪತ್ತೆಯಾಗಿದೆ.</p>.<p>ಹೈದರಾಬಾದ್ನ ಕಿರಣ್ (25) ತನ್ನ ಗೆಳೆಯರೊಂದಿಗೆ ಹುಲಿಗಿ ಜಾತ್ರೆ ಮುಗಿಸಿಕೊಂಡು ಬುಧವಾರ ಹಂಪಿಗೆ ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಈಜಾಡುತ್ತಿದ್ದಾಗ ನಾಪತ್ತೆಯಾಗಿದ್ದರು.</p>.<p>ವಿಷಯ ತಿಳಿದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಗುರುವಾರ ಮೃತ ದೇಹ ಪತ್ತೆಯಾಗಿದೆ. ನದಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮೃತದೇಹ ನೋಡಿದ ಗೆಳೆಯರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಹಂಪಿಯ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಎರಡು ದಿನಗಳ ನಂತರ ಪತ್ತೆಯಾಗಿದೆ.</p>.<p>ಹೈದರಾಬಾದ್ನ ಕಿರಣ್ (25) ತನ್ನ ಗೆಳೆಯರೊಂದಿಗೆ ಹುಲಿಗಿ ಜಾತ್ರೆ ಮುಗಿಸಿಕೊಂಡು ಬುಧವಾರ ಹಂಪಿಗೆ ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಈಜಾಡುತ್ತಿದ್ದಾಗ ನಾಪತ್ತೆಯಾಗಿದ್ದರು.</p>.<p>ವಿಷಯ ತಿಳಿದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಗುರುವಾರ ಮೃತ ದೇಹ ಪತ್ತೆಯಾಗಿದೆ. ನದಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮೃತದೇಹ ನೋಡಿದ ಗೆಳೆಯರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>