<p><strong>ಕುರುಗೋಡು</strong>: ‘ದೇಶದ ಅಭಿವೃದ್ಧಿ ಯುವಕರನ್ನು ಅವಲಂಬಿಸಿದೆ. ಅವರು ಸದಾ ಕ್ರಿಯಾಶೀಲರಾಗಿರಬೇಕು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಪಟ್ಟಣಸೆರಗು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಗಜಾನನ ಯುವಕ ಸಂಘದ ಬೆಳ್ಳಿ ಮಹೋತ್ಸವ ಮತ್ತು ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಕರು ಸಂಘಟಿತರಾಗಬೇಕು. ಶಿಕ್ಷಣ, ಆರೋಗ್ಯ, ಕ್ರೀಡೆ ಸೇರಿದಂತೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು.</p>.<p>ವೈದ್ಯ ಮಧುಸೂದನ್ ಕಾರಿಗನೂರು ಮಾತನಾಡಿ, ‘ಅನ್ಯಭಾಷಿಕರ ಪ್ರಭಾವದಿಂದ ನಗರ ಪ್ರದೇಶಗಳಲ್ಲಿ ತಾಯಿಭಾಷೆ ಕಣ್ಮರೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಮಾತೃಭಾಷೆಯ ಸೊಬಗು ಕಾಣಸಿಗುತ್ತದೆ. ನಾಡು– ನುಡಿ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಎಂದರು.</p>.<p>ಸಿಪಿಐ ವಿಶ್ವನಾಥ್ ಹಿರೇಗೌಡರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಿಮಾತ್ಯ ದುಶ್ಚಟಗಳಿಗೆ ಬಲಿಯಾಗಿ ಅಧ್ಯಯನದಿಂದ ವಿಮುಖರಾಗುತ್ತಿದ್ದಾರೆ. ವಿದ್ಯಾರ್ಥಿಗೆ ಮತ್ತು ಯುವಕರಿಗೆ ಪ್ರೇರಣೆಯಾಗುವ ಕಾರ್ಯಕ್ರಮ ರೂಪಿಸಿರುವುದು ಮಾದರಿಯಾಗಿದೆ. ಗ್ರಾಮದಲ್ಲಿ ಯುವಕರಿಗೆ ಉತ್ಸಾಹ ತುಂಬುವ ಕಾರ್ಯ ನಿರಂತರವಾಗಿರಲಿ’ ಎಂದರು.</p>.<p>ವೇದಿಕೆ ಕಾರ್ಯಕ್ರಮಕ್ಕೆ ಮೊದಲು ಅಲಂಕೃತ ಬೆಳ್ಳಿ ರಥದಲ್ಲಿ ತಾಯಿ ಭುವನೇಶ್ವರಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ಡೊಳ್ಳು, ಪೂರ್ಣಕುಂಭ, ಕಳಸ, ಮಂಗಳವಾದ್ಯ ಭಾಗವಹಿಸಿ ಮೆರವಣಿಗೆ ಮೆರುಗು ಹೆಚ್ಚಿಸಿದ್ದವು.</p>.<p>ಗ್ರಾಮದಲ್ಲಿ ಓದಿ ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಗೌರವಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಪ್ಪ, ಪಿಎಸ್ಐ ಸುಪ್ರೀತ್ ವಿರೂಪಕ್ಷಪ್ಪ, ಎಮ್ಮಿಗನೂರು ಜೆಸ್ಕಾಂ ಜೆ.ಇ. ಬಸವರಾಜ್, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ. ಗುರುಬಸವರಾಜ್, ಗ್ರಾಮ ಲೆಕ್ಕಾಧಿಕಾರಿ ಎನ್. ದೇವರಾಜ್, ಪ್ರಭಾರ ಮುಖ್ಯಶಿಕ್ಷಕ ಮಂಜುನಾಥ್ ಹಾಗೂ ಗಜಾನನ ಯುವಕ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ‘ದೇಶದ ಅಭಿವೃದ್ಧಿ ಯುವಕರನ್ನು ಅವಲಂಬಿಸಿದೆ. ಅವರು ಸದಾ ಕ್ರಿಯಾಶೀಲರಾಗಿರಬೇಕು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಪಟ್ಟಣಸೆರಗು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಗಜಾನನ ಯುವಕ ಸಂಘದ ಬೆಳ್ಳಿ ಮಹೋತ್ಸವ ಮತ್ತು ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಕರು ಸಂಘಟಿತರಾಗಬೇಕು. ಶಿಕ್ಷಣ, ಆರೋಗ್ಯ, ಕ್ರೀಡೆ ಸೇರಿದಂತೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು.</p>.<p>ವೈದ್ಯ ಮಧುಸೂದನ್ ಕಾರಿಗನೂರು ಮಾತನಾಡಿ, ‘ಅನ್ಯಭಾಷಿಕರ ಪ್ರಭಾವದಿಂದ ನಗರ ಪ್ರದೇಶಗಳಲ್ಲಿ ತಾಯಿಭಾಷೆ ಕಣ್ಮರೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಮಾತೃಭಾಷೆಯ ಸೊಬಗು ಕಾಣಸಿಗುತ್ತದೆ. ನಾಡು– ನುಡಿ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಎಂದರು.</p>.<p>ಸಿಪಿಐ ವಿಶ್ವನಾಥ್ ಹಿರೇಗೌಡರ್ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಿಮಾತ್ಯ ದುಶ್ಚಟಗಳಿಗೆ ಬಲಿಯಾಗಿ ಅಧ್ಯಯನದಿಂದ ವಿಮುಖರಾಗುತ್ತಿದ್ದಾರೆ. ವಿದ್ಯಾರ್ಥಿಗೆ ಮತ್ತು ಯುವಕರಿಗೆ ಪ್ರೇರಣೆಯಾಗುವ ಕಾರ್ಯಕ್ರಮ ರೂಪಿಸಿರುವುದು ಮಾದರಿಯಾಗಿದೆ. ಗ್ರಾಮದಲ್ಲಿ ಯುವಕರಿಗೆ ಉತ್ಸಾಹ ತುಂಬುವ ಕಾರ್ಯ ನಿರಂತರವಾಗಿರಲಿ’ ಎಂದರು.</p>.<p>ವೇದಿಕೆ ಕಾರ್ಯಕ್ರಮಕ್ಕೆ ಮೊದಲು ಅಲಂಕೃತ ಬೆಳ್ಳಿ ರಥದಲ್ಲಿ ತಾಯಿ ಭುವನೇಶ್ವರಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ಡೊಳ್ಳು, ಪೂರ್ಣಕುಂಭ, ಕಳಸ, ಮಂಗಳವಾದ್ಯ ಭಾಗವಹಿಸಿ ಮೆರವಣಿಗೆ ಮೆರುಗು ಹೆಚ್ಚಿಸಿದ್ದವು.</p>.<p>ಗ್ರಾಮದಲ್ಲಿ ಓದಿ ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಗೌರವಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಪ್ಪ, ಪಿಎಸ್ಐ ಸುಪ್ರೀತ್ ವಿರೂಪಕ್ಷಪ್ಪ, ಎಮ್ಮಿಗನೂರು ಜೆಸ್ಕಾಂ ಜೆ.ಇ. ಬಸವರಾಜ್, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ. ಗುರುಬಸವರಾಜ್, ಗ್ರಾಮ ಲೆಕ್ಕಾಧಿಕಾರಿ ಎನ್. ದೇವರಾಜ್, ಪ್ರಭಾರ ಮುಖ್ಯಶಿಕ್ಷಕ ಮಂಜುನಾಥ್ ಹಾಗೂ ಗಜಾನನ ಯುವಕ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>