<p>ಬಳ್ಳಾರಿ: ಜಿಲ್ಲೆಯಲ್ಲಿ ಜ. 6 ಮತ್ತು 7 ರಂದು ರಾಜ್ಯಮಟ್ಟದ ಯುವಜನೋತ್ಸವ ಏರ್ಪಾಡಿಸಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಜ.6ರಂದು ನಗರದ ವಿಮ್ಸ್ ಮೈದಾನದಲ್ಲಿ ಸಂಜೆ ಯುವಜನೋತ್ಸವ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.</p>.<p>ವಿಭಿನ್ನವಾಗಿ ಉತ್ಸವದ ರೀತಿ ಮೇಳ ಸಂಘಟಿಸಬೇಕು. ಪ್ರತಿ ಜಿಲ್ಲೆಯಿಂದ 35 ಪ್ರತಿನಿಧಿಗಳಂತೆ 1000 ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದು, ಭಾರತೀಯ ಶಾಸ್ತ್ರೀಯ ಕಲೆಗಳನ್ನು ಯುವಜನರಲ್ಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಪ್ರತಿನಿಧಿಗಳಿಗೆ ಉತ್ತಮ ವಸತಿ, ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಭದ್ರತೆ, ಸಾರಿಗೆ ಸೇರಿದಂತೆ ಕೋವಿಡ್ ನಿಯಮಗಳ ಪಾಲನೆ ಜತೆ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಯುವಜನೋತ್ಸವದಲ್ಲಿ ನಡೆಯುವ ಜಾನಪದ ನೃತ್ಯ, ಹಾಡು, ಎಕಾಂಕ ನಾಟಕ, ಮತ್ತಿತರ ಸ್ಪರ್ಧೆಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಜಿಲ್ಲೆಯಲ್ಲಿ ಜ. 6 ಮತ್ತು 7 ರಂದು ರಾಜ್ಯಮಟ್ಟದ ಯುವಜನೋತ್ಸವ ಏರ್ಪಾಡಿಸಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಜ.6ರಂದು ನಗರದ ವಿಮ್ಸ್ ಮೈದಾನದಲ್ಲಿ ಸಂಜೆ ಯುವಜನೋತ್ಸವ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.</p>.<p>ವಿಭಿನ್ನವಾಗಿ ಉತ್ಸವದ ರೀತಿ ಮೇಳ ಸಂಘಟಿಸಬೇಕು. ಪ್ರತಿ ಜಿಲ್ಲೆಯಿಂದ 35 ಪ್ರತಿನಿಧಿಗಳಂತೆ 1000 ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದು, ಭಾರತೀಯ ಶಾಸ್ತ್ರೀಯ ಕಲೆಗಳನ್ನು ಯುವಜನರಲ್ಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಪ್ರತಿನಿಧಿಗಳಿಗೆ ಉತ್ತಮ ವಸತಿ, ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಭದ್ರತೆ, ಸಾರಿಗೆ ಸೇರಿದಂತೆ ಕೋವಿಡ್ ನಿಯಮಗಳ ಪಾಲನೆ ಜತೆ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಯುವಜನೋತ್ಸವದಲ್ಲಿ ನಡೆಯುವ ಜಾನಪದ ನೃತ್ಯ, ಹಾಡು, ಎಕಾಂಕ ನಾಟಕ, ಮತ್ತಿತರ ಸ್ಪರ್ಧೆಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>