<p><strong>ಹೊಸಪೇಟೆ:</strong> ‘ಯುವಕರು ದೊಡ್ಡ ಕನಸುಗಳನ್ನು ಕಾಣಬೇಕು. ದೊಡ್ಡ ಕನಸುಗಳಿಂದ ದೊಡ್ಡ ಸಾಧನೆ ಮಾಡಲು ಸಾಧ್ಯ’ ಎಂದು ಪ್ರೌಢದೇವರಾಯ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಶಶಿಧರ್ ತಿಳಿಸಿದರು.</p>.<p>ಕೋರ್ ಎಜ್ಯುಕೇಷನ್ ಟ್ರಸ್ಟ್ನ ಕ್ಯಾಡ್ ತರಬೇತಿ ಕೇಂದ್ರದಿಂದ ಇತ್ತೀಚೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕೌಶಲ ದಿನಾಚರಣೆ ಹಾಗೂ ಬಿ. ಹರೀಶ್ ಅವರು ‘ಕನಸು’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಜಾಗತಿಕ ಮಟ್ಟದಲ್ಲಿ ಉದ್ಯೋಗ ಮಾರುಕಟ್ಟೆಯ ಸ್ವರೂಪದಲ್ಲಿ ದೊಡ್ಡ ಬದಲಾವಣೆ ಉಂಟಾಗಿದೆ. ಎಲ್ಲರ ಗಮನ ಈಗ ಕೌಶಲದ ಮೇಲೆ ಕೇಂದ್ರೀಕರಿಸಿದೆ. ವಿನೂತನವಾದ ಕೌಶಲ, ಹೊಸಬಗೆಯ ತಾಂತ್ರಿಕತೆ, ತಾಂತ್ರಿಕ ಕೌಶಲವನ್ನು ಅನುಸರಿಸಿ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗ ಕೊಡುತ್ತಿವೆ’ ಎಂದು ವಿವರಿಸಿದರು.</p>.<p>‘ಶಿಕ್ಷಣ ಪಡೆದು ಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತರಾದರೆ ಸಾಲದು. ಗಳಿಸಿದ ಶಿಕ್ಷಣದ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ಕೌಶಲ ಇದ್ದವರಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಿದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕನಕೇಶಮೂರ್ತಿ ತಿಳಿಸಿದರು.</p>.<p>ನಿವೃತ್ತ ಶಿಕ್ಷಕ ಮಾ.ಬ. ಸೋಮಣ್ಣ, ಗ್ಲೋಬಲ್ ಎನ್ವಿರಾನ್ಮೆಂಟ್ ಮತ್ತು ಮೈನಿಂಗ್ ಸರ್ವಿಸೆಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಮೇಶ್ವರರಾವ, ಪ್ರಾಧ್ಯಾಪಕಿ ಪಾರ್ವತಿ, ಬಿ. ಹರೀಶ್ ಇದ್ದರು. ಕ್ಯಾಡ್ ಕೇಂದ್ರದ ವಿದ್ಯಾರ್ಥಿಗಳಿಗೆ ಕೌಶಲ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಯುವಕರು ದೊಡ್ಡ ಕನಸುಗಳನ್ನು ಕಾಣಬೇಕು. ದೊಡ್ಡ ಕನಸುಗಳಿಂದ ದೊಡ್ಡ ಸಾಧನೆ ಮಾಡಲು ಸಾಧ್ಯ’ ಎಂದು ಪ್ರೌಢದೇವರಾಯ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಶಶಿಧರ್ ತಿಳಿಸಿದರು.</p>.<p>ಕೋರ್ ಎಜ್ಯುಕೇಷನ್ ಟ್ರಸ್ಟ್ನ ಕ್ಯಾಡ್ ತರಬೇತಿ ಕೇಂದ್ರದಿಂದ ಇತ್ತೀಚೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕೌಶಲ ದಿನಾಚರಣೆ ಹಾಗೂ ಬಿ. ಹರೀಶ್ ಅವರು ‘ಕನಸು’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಜಾಗತಿಕ ಮಟ್ಟದಲ್ಲಿ ಉದ್ಯೋಗ ಮಾರುಕಟ್ಟೆಯ ಸ್ವರೂಪದಲ್ಲಿ ದೊಡ್ಡ ಬದಲಾವಣೆ ಉಂಟಾಗಿದೆ. ಎಲ್ಲರ ಗಮನ ಈಗ ಕೌಶಲದ ಮೇಲೆ ಕೇಂದ್ರೀಕರಿಸಿದೆ. ವಿನೂತನವಾದ ಕೌಶಲ, ಹೊಸಬಗೆಯ ತಾಂತ್ರಿಕತೆ, ತಾಂತ್ರಿಕ ಕೌಶಲವನ್ನು ಅನುಸರಿಸಿ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗ ಕೊಡುತ್ತಿವೆ’ ಎಂದು ವಿವರಿಸಿದರು.</p>.<p>‘ಶಿಕ್ಷಣ ಪಡೆದು ಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತರಾದರೆ ಸಾಲದು. ಗಳಿಸಿದ ಶಿಕ್ಷಣದ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ಕೌಶಲ ಇದ್ದವರಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಿದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕನಕೇಶಮೂರ್ತಿ ತಿಳಿಸಿದರು.</p>.<p>ನಿವೃತ್ತ ಶಿಕ್ಷಕ ಮಾ.ಬ. ಸೋಮಣ್ಣ, ಗ್ಲೋಬಲ್ ಎನ್ವಿರಾನ್ಮೆಂಟ್ ಮತ್ತು ಮೈನಿಂಗ್ ಸರ್ವಿಸೆಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಮೇಶ್ವರರಾವ, ಪ್ರಾಧ್ಯಾಪಕಿ ಪಾರ್ವತಿ, ಬಿ. ಹರೀಶ್ ಇದ್ದರು. ಕ್ಯಾಡ್ ಕೇಂದ್ರದ ವಿದ್ಯಾರ್ಥಿಗಳಿಗೆ ಕೌಶಲ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>