<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.<br /> <br /> ತುಂಗಭದ್ರಾ ನದಿ ತೀರದ ಪಾವನ ಕ್ಷೇತ್ರದಲ್ಲಿ ಸೇರಿದ್ದ ಅಪಾರ ಭಕ್ತರ ಜಯಘೋಷ, ಹರ್ಷೋದ್ಗಾರಗಳ ನಡುವೆ ಸ್ವಾಮಿಯ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನೆರವೇರಿತು.<br /> <br /> ಪಲ್ಲಕ್ಕಿಯಲ್ಲಿ ಸಾಗಿಬಂದ ಸ್ವಾಮಿಯ ಉತ್ಸವಮೂರ್ತಿ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಸ್ವಾಮಿಯ ನಿಶಾನೆ ಹಾಗೂ ಫೋಟೋ ಹರಾಜು ಜರುಗಿತು. ನಂತರ ವೆಂಕಟರಮಣ ಗೋವಿಂದ... ಎಂಬ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಚಾಲನೆ ಪಡೆದುಕೊಂಡಿತು. <br /> <br /> ಬಳ್ಳಾರಿ ಮತ್ತು ಗದಗ ಜಿಲ್ಲೆಯಿಂದ ಸಹಸ್ರಾರು ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಮದಲಗಟ್ಟಿ ಸುತ್ತಮುತ್ತಲ ಹಳ್ಳಿಗಳ ರೈತರು ಕುಟುಂಬ ಪರಿವಾರದೊಡನೆ ಎತ್ತಿನ ಬಂಡಿ, ಟೆಂಪೋ, ಟ್ರ್ಯಾಕ್ಟರ್ ಗಳಲ್ಲಿ ಜಾತ್ರೆಗೆ ಆಗಮಿಸಿದ್ದರು.<br /> ಬೆಳಗ್ಗೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ಅಗ್ನಿಕುಂಡ ಜರುಗಿತು.<br /> ಪಿಎಸ್ಐಗಳಾದ ಆಂಜನೇಯ, ಕೆ.ಜಿ. ಗೋವಿಂದರಾಜ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿತ್ತು.<br /> <br /> <strong>ಟ್ರಾಫಿಕ್ ಕಿರಿಕಿರಿ</strong><br /> ಬಳ್ಳಾರಿ ಮತ್ತು ಗದಗ ಜಿಲ್ಲೆಯ ಗಡಿಯಂಚಿನಲ್ಲಿ ನಡೆಯುವ ಬೃಹತ ಜಾತ್ರೆಗೆ ಅಪಾರ ಸಂಖ್ಯೆಯ ವಾಹನಗಳು ಬಂದಿದ್ದರಿಂದ ಸೂಕ್ತ ನಿಲುಗಡೆ ವ್ಯವಸ್ಥೆ ಇಲ್ಲದೇ ಪರದಾಡುವ ಸ್ಥಿತಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.<br /> <br /> ತುಂಗಭದ್ರಾ ನದಿ ತೀರದ ಪಾವನ ಕ್ಷೇತ್ರದಲ್ಲಿ ಸೇರಿದ್ದ ಅಪಾರ ಭಕ್ತರ ಜಯಘೋಷ, ಹರ್ಷೋದ್ಗಾರಗಳ ನಡುವೆ ಸ್ವಾಮಿಯ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನೆರವೇರಿತು.<br /> <br /> ಪಲ್ಲಕ್ಕಿಯಲ್ಲಿ ಸಾಗಿಬಂದ ಸ್ವಾಮಿಯ ಉತ್ಸವಮೂರ್ತಿ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಸ್ವಾಮಿಯ ನಿಶಾನೆ ಹಾಗೂ ಫೋಟೋ ಹರಾಜು ಜರುಗಿತು. ನಂತರ ವೆಂಕಟರಮಣ ಗೋವಿಂದ... ಎಂಬ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಚಾಲನೆ ಪಡೆದುಕೊಂಡಿತು. <br /> <br /> ಬಳ್ಳಾರಿ ಮತ್ತು ಗದಗ ಜಿಲ್ಲೆಯಿಂದ ಸಹಸ್ರಾರು ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಮದಲಗಟ್ಟಿ ಸುತ್ತಮುತ್ತಲ ಹಳ್ಳಿಗಳ ರೈತರು ಕುಟುಂಬ ಪರಿವಾರದೊಡನೆ ಎತ್ತಿನ ಬಂಡಿ, ಟೆಂಪೋ, ಟ್ರ್ಯಾಕ್ಟರ್ ಗಳಲ್ಲಿ ಜಾತ್ರೆಗೆ ಆಗಮಿಸಿದ್ದರು.<br /> ಬೆಳಗ್ಗೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ಅಗ್ನಿಕುಂಡ ಜರುಗಿತು.<br /> ಪಿಎಸ್ಐಗಳಾದ ಆಂಜನೇಯ, ಕೆ.ಜಿ. ಗೋವಿಂದರಾಜ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿತ್ತು.<br /> <br /> <strong>ಟ್ರಾಫಿಕ್ ಕಿರಿಕಿರಿ</strong><br /> ಬಳ್ಳಾರಿ ಮತ್ತು ಗದಗ ಜಿಲ್ಲೆಯ ಗಡಿಯಂಚಿನಲ್ಲಿ ನಡೆಯುವ ಬೃಹತ ಜಾತ್ರೆಗೆ ಅಪಾರ ಸಂಖ್ಯೆಯ ವಾಹನಗಳು ಬಂದಿದ್ದರಿಂದ ಸೂಕ್ತ ನಿಲುಗಡೆ ವ್ಯವಸ್ಥೆ ಇಲ್ಲದೇ ಪರದಾಡುವ ಸ್ಥಿತಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>