‘ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಸಂಗ್ರಹಿಸಿ ಡಲಾಗಿದೆ’ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಕಾಶ್ ತಿಳಿಸಿದರು. ‘ಈ ಬಾರಿಯ ಮುಂಗಾರು ಮಳೆ ಆರಂಭದಲ್ಲಿ ಉತ್ತಮವಾಗಿ ಬಂದಿದ್ದರಿಂದ ಹೊಲಗಳು ಹಸನಾಗಿವೆ. ಹೆಸರು,ಸಜ್ಜೆ, ತೊಗರಿ, ಸೂರ್ಯಕಾಂತಿ, ಎಳ್ಳು ಬಿತ್ತನೆ ಮಾಡುತ್ತಿದ್ದೇವೆ. ಮುಂದೆ ಮುಂಗಾರು ಬೆಳೆಗಳು ಉತ್ತಮ ಫಸಲು ನೀಡುವ ಭರವಸೆ ಇದೆ’ ಎಂದು ನಾಗೇನಹಳ್ಳಿ ಗ್ರಾಮದ ರೈತ ಅಂಜಿನಪ್ಪ ಹೇಳಿದರು.