<p><strong>ಸಂಡೂರು:</strong> ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಒಳ ಚರಂಡಿಗಳನ್ನು ಸ್ವಚ್ಛವಾಗಿಡಲು ಮತ್ತು ಬೀದಿ ದೀಪಗಳ ಸಮರ್ಪಕ ನಿರ್ವಹಣೆ, ಉದ್ಯಾನವನಗಳನ್ನು ಸರಿಯಾಗಿ ನಿರ್ವಹಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಮಂಗಳವಾರ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಸಮಯಕ್ಕೆ ಸರಿಯಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಒಳ ಚರಂಡಿಗಳ ಮೂಲಕ ಹಾದು ಹೋಗಿರುವ ಪೈಪ್ಗಳು ಒಡೆದು ಹೋಗಿವೆ. ಇದೇ ನೀರನ್ನು ಉಪಯೋಗಿ ಸುತ್ತಿರುವ ಜನರು ಹಲವು ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ತಿಳಿಸಿದರು.<br /> <br /> ಬೀದಿ ದೀಪಗಳ ಸರಿಯಾದ ನಿರ್ವಹಣೆ ಇಲ್ಲದೆ ರಾತ್ರಿ ವೇಳೆಯಲ್ಲಿ ಟ್ಯೂಷನ್ಗೆ ಹೋಗಿಬರುವ ಮಕ್ಕಳು ಹಾಗೂ ಮುದುಕರು ತೊಂದರೆ ಪಡು ತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.<br /> <br /> ಉದ್ಯಾನ ವನಗಳು ಹೆಸರಿಗೆ ಮಾತ್ರ ಇವೆ ಎನ್ನುವಂತಾಗಿದೆ. ಸ್ವಚ್ಛತೆ ಮಾಯವಾಗಿದ್ದು ಮಕ್ಕಳು ರಜೆ ದಿನಗಳಲ್ಲಿ ಅಲ್ಲಿಗೆ ಹೆಚ್ಚಾಗಿ ಆಟವಾಡು ವಂತೆ ಮಾಡುವ ಕೆಲಸವನ್ನು ಪುರಸಭೆ ಯವರು ಮಾಡಬೇಕಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.<br /> <br /> ಪ್ರತಿಭಟನೆಯಲ್ಲಿ ಸಂಘಟನೆಯ ಕುಮಾರಸ್ವಾಮಿ, ದಾದಾ ಪೀರ್, ಮಂಜುನಾಥ್, ಕೆ.ಆರ್. ಕುಮಾರ್ಸ್ವಾಮಿ, ರವಿಕುಮಾರ್, ಅಂಜಿನಪ್ಪ, ವರಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಒಳ ಚರಂಡಿಗಳನ್ನು ಸ್ವಚ್ಛವಾಗಿಡಲು ಮತ್ತು ಬೀದಿ ದೀಪಗಳ ಸಮರ್ಪಕ ನಿರ್ವಹಣೆ, ಉದ್ಯಾನವನಗಳನ್ನು ಸರಿಯಾಗಿ ನಿರ್ವಹಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಮಂಗಳವಾರ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಸಮಯಕ್ಕೆ ಸರಿಯಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಒಳ ಚರಂಡಿಗಳ ಮೂಲಕ ಹಾದು ಹೋಗಿರುವ ಪೈಪ್ಗಳು ಒಡೆದು ಹೋಗಿವೆ. ಇದೇ ನೀರನ್ನು ಉಪಯೋಗಿ ಸುತ್ತಿರುವ ಜನರು ಹಲವು ರೀತಿಯ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ತಿಳಿಸಿದರು.<br /> <br /> ಬೀದಿ ದೀಪಗಳ ಸರಿಯಾದ ನಿರ್ವಹಣೆ ಇಲ್ಲದೆ ರಾತ್ರಿ ವೇಳೆಯಲ್ಲಿ ಟ್ಯೂಷನ್ಗೆ ಹೋಗಿಬರುವ ಮಕ್ಕಳು ಹಾಗೂ ಮುದುಕರು ತೊಂದರೆ ಪಡು ತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.<br /> <br /> ಉದ್ಯಾನ ವನಗಳು ಹೆಸರಿಗೆ ಮಾತ್ರ ಇವೆ ಎನ್ನುವಂತಾಗಿದೆ. ಸ್ವಚ್ಛತೆ ಮಾಯವಾಗಿದ್ದು ಮಕ್ಕಳು ರಜೆ ದಿನಗಳಲ್ಲಿ ಅಲ್ಲಿಗೆ ಹೆಚ್ಚಾಗಿ ಆಟವಾಡು ವಂತೆ ಮಾಡುವ ಕೆಲಸವನ್ನು ಪುರಸಭೆ ಯವರು ಮಾಡಬೇಕಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.<br /> <br /> ಪ್ರತಿಭಟನೆಯಲ್ಲಿ ಸಂಘಟನೆಯ ಕುಮಾರಸ್ವಾಮಿ, ದಾದಾ ಪೀರ್, ಮಂಜುನಾಥ್, ಕೆ.ಆರ್. ಕುಮಾರ್ಸ್ವಾಮಿ, ರವಿಕುಮಾರ್, ಅಂಜಿನಪ್ಪ, ವರಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>