<p><strong>ಕೊಟ್ಟೂರು:</strong> ಮನುಷ್ಯನ ಅಂಗಗಳಲ್ಲಿ ಕಣ್ಣು ಅತ್ಯಂತ ಪ್ರಮುಖವಾದುದು, ಯಾರೊಬ್ಬರೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಚಾನುಕೋಟಿ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು.<br /> <br /> ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಡೋಣೂರು ಚಾನುಕೋಟಿ ಮಠ ಮತ್ತು ಎಂ.ಆರ್.ಟಿ. ಗ್ರಾಮಾಂತರ ಕಣ್ಣಿನ ಆಸ್ಪತ್ರೆ ಕೊಂಡ್ಲಹಳ್ಳಿ ಜಂಟಿಯಾಗಿ ಹಮ್ಮಿ ಕೊಂಡ್ದ್ದಿದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದರು.<br /> <br /> ಶ್ರೀಮಠದಿಂದ ಕಳೆದ 17 ವರ್ಷ ಗಳಲ್ಲಿ 31 ಉಚಿತ ನೇತ್ರ ಚಿಕಿತ್ಸಾ ಶಿಬಿರ ವನ್ನು ನಡೆಸಿದ್ದೇವೆ. ಇದರಲ್ಲಿ 2500 ಜನರಿಗೆ ನೇತ್ರ ಚಿಕಿತ್ಸೆ ಮಾಡಲಾಗಿದೆ. 22 ಸಾವಿರ ಜನರ ನೇತ್ರ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮುದಾಯ ಆರೋಗ್ಯ ಕೇಂದ್ರ ಡಾ. ಸುಲೋಚನಾ, ನೇತ್ರ ತಜ್ಞರಾದ ಡಾ. ನಾಗರಾಜ್ ಅನೇಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಅವರ ಸೇವೆ ಬಡವರಿಗೆ ನಿರಂತರವಾಗಿ ಸಿಗುವಂತಾಗಲಿ ಎಂದರು.<br /> <br /> ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಕಾಸಲ ಸಾವಿತ್ರಮ್ಮ ಮತ್ತು ಉಪಾಧ್ಯಕ್ಷ ಹರಪನಹಳ್ಳಿ ಗುರುಬಸವರಾಜ್, ಡೋಣೂರು ಚಾನುಕೋಟಿ ಮಠದ ಸೇವೆ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು. <br /> <br /> ಶಿಬಿರದ ಸಾನ್ನಿಧ್ಯ ವಹಿಸಿದ್ದ ಶ್ರೀ ಮಲ್ಲಿಕಾರ್ಜುನ ಶಿವಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ದರು. ನಂದಿಪುರ ಕ್ಷೇತ್ರ ಶ್ರೀಮಹೇಶ್ವರ ಸ್ವಾಮೀಜಿ, ಪ್ರತಿಭಾವಂತ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದರು.<br /> <br /> ಕೊಟ್ಟೂರು ಹಾಗೂ ಸುತ್ತಮುತ್ತಲ ಹಳ್ಳಿಗಳಿಂದ ಇನ್ನೂರಕ್ಕೂ ಹೆಚ್ಚು ಕಣ್ಣಿನ ತೊಂದರೆ ಇರುವವರು ಶಿಬಿರದಲ್ಲಿ ಭಾಗವಹಿಸಿದ್ದರು. ನೇತ್ರ ತಜ್ಞ ಡಾ. ನಾಗರಾಜ್, ಸಹಾಯಕ ಸಬ್ ಇನ್ಸಪೆಕ್ಟರ್ ಕೊಟ್ರೇಶ ಇದ್ದರು. ಪ್ರಶಾಂತ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ಮನುಷ್ಯನ ಅಂಗಗಳಲ್ಲಿ ಕಣ್ಣು ಅತ್ಯಂತ ಪ್ರಮುಖವಾದುದು, ಯಾರೊಬ್ಬರೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಚಾನುಕೋಟಿ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು.<br /> <br /> ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಡೋಣೂರು ಚಾನುಕೋಟಿ ಮಠ ಮತ್ತು ಎಂ.ಆರ್.ಟಿ. ಗ್ರಾಮಾಂತರ ಕಣ್ಣಿನ ಆಸ್ಪತ್ರೆ ಕೊಂಡ್ಲಹಳ್ಳಿ ಜಂಟಿಯಾಗಿ ಹಮ್ಮಿ ಕೊಂಡ್ದ್ದಿದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದರು.<br /> <br /> ಶ್ರೀಮಠದಿಂದ ಕಳೆದ 17 ವರ್ಷ ಗಳಲ್ಲಿ 31 ಉಚಿತ ನೇತ್ರ ಚಿಕಿತ್ಸಾ ಶಿಬಿರ ವನ್ನು ನಡೆಸಿದ್ದೇವೆ. ಇದರಲ್ಲಿ 2500 ಜನರಿಗೆ ನೇತ್ರ ಚಿಕಿತ್ಸೆ ಮಾಡಲಾಗಿದೆ. 22 ಸಾವಿರ ಜನರ ನೇತ್ರ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮುದಾಯ ಆರೋಗ್ಯ ಕೇಂದ್ರ ಡಾ. ಸುಲೋಚನಾ, ನೇತ್ರ ತಜ್ಞರಾದ ಡಾ. ನಾಗರಾಜ್ ಅನೇಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಅವರ ಸೇವೆ ಬಡವರಿಗೆ ನಿರಂತರವಾಗಿ ಸಿಗುವಂತಾಗಲಿ ಎಂದರು.<br /> <br /> ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಕಾಸಲ ಸಾವಿತ್ರಮ್ಮ ಮತ್ತು ಉಪಾಧ್ಯಕ್ಷ ಹರಪನಹಳ್ಳಿ ಗುರುಬಸವರಾಜ್, ಡೋಣೂರು ಚಾನುಕೋಟಿ ಮಠದ ಸೇವೆ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು. <br /> <br /> ಶಿಬಿರದ ಸಾನ್ನಿಧ್ಯ ವಹಿಸಿದ್ದ ಶ್ರೀ ಮಲ್ಲಿಕಾರ್ಜುನ ಶಿವಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ದರು. ನಂದಿಪುರ ಕ್ಷೇತ್ರ ಶ್ರೀಮಹೇಶ್ವರ ಸ್ವಾಮೀಜಿ, ಪ್ರತಿಭಾವಂತ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದರು.<br /> <br /> ಕೊಟ್ಟೂರು ಹಾಗೂ ಸುತ್ತಮುತ್ತಲ ಹಳ್ಳಿಗಳಿಂದ ಇನ್ನೂರಕ್ಕೂ ಹೆಚ್ಚು ಕಣ್ಣಿನ ತೊಂದರೆ ಇರುವವರು ಶಿಬಿರದಲ್ಲಿ ಭಾಗವಹಿಸಿದ್ದರು. ನೇತ್ರ ತಜ್ಞ ಡಾ. ನಾಗರಾಜ್, ಸಹಾಯಕ ಸಬ್ ಇನ್ಸಪೆಕ್ಟರ್ ಕೊಟ್ರೇಶ ಇದ್ದರು. ಪ್ರಶಾಂತ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>