<p>ಹೂವಿನ ಹಡಗಲಿ: ಸೋಲು- ಗೆಲುವು ಸಾಮಾನ್ಯ. ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹುಲುಗಪ್ಪ ಹೇಳಿದರು.<br /> <br /> ಪಟ್ಟಣದ ಜಿಪಿಜಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಯಶಾಲಿಗಳಾಗಿ ಜಿಲ್ಲಾಮಟ್ಟದಲ್ಲಿ ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಿ ಆಟವನ್ನಾಡಿ ಎಂದರು.<br /> <br /> ಪ್ರಗತಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರಾದ ಪರಮೇಶ್ವರಪ್ಪ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಆರೋಗ್ಯಕ್ಕೆ ಕ್ರೀಡಾಕೂಟಗಳು ಸಹಕಾರಿ ಯಾಗಿವೆ ಎಂದರು.<br /> <br /> ಆಟಗಳು ಮನುಷ್ಯನನ್ನು ಎತ್ತರಕ್ಕೆ ಬೆಳೆಸುತ್ತವೆ. ಎಲ್ಲ ಮಕ್ಕಳು ಉತ್ತಮ ಪ್ರದರ್ಶನ ನೀಡಿ ಯಶಸ್ಸಿನ ಕಡೆ ಹೆಜ್ಜೆ ಹಾಕಿ ಎಂದರು.<br /> <br /> ಜಿ.ಪಂ.ಸದಸ್ಯೆ ಶೋಭಾ ಬೆಂಡಿಗೇರಿ ಪ್ರತಿಜ್ಞಾನ ವಿಧಿ ಬೋಧಿಸಿದರು. ಜಿ.ಪಂ.ಸದಸ್ಯರಾದ ವಸಂತ ತಹಸೀ ಲ್ದಾರ್ ಬಸವರಾಜ ಸೋಮಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಪಾರಿ ಬಸವರಾಜ, ಜಿ.ಪಂ.ಸದಸ್ಯರಾದ ವಸಂತ, ನಳಿನಾ ವೀರಭದ್ರಪ್ಪ ಮಾತನಾಡಿದರು. <br /> <br /> ಪುರಸಭೆ ಅಧ್ಯಕ್ಷೆ ರೇಣುಕಮ್ಮ, ತಾ.ಪಂ.ಉಪಾಧ್ಯಕ್ಷೆ ಮಂಗಳಾ ಹಾಲೇಶ್, ಡಿ.ಮಲ್ಲೇಶ ನಾಯ್ಕ, ದೈಹಿಕ ಪರಿವೀಕ್ಷಕ ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಲ್.ವಿ.ಗುಡ್ಯಾ ನಾಯ್ಕ, ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ವತ್ಥನಾರಾಯಾಣ, ತಾಲ್ಲೂಕು ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಜಾತಪ್ಪ ಉಪಸ್ಥಿತರಿದ್ದರು.<br /> <br /> ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಾರಿ ಬಸವರಾಜ ಸ್ವಾಗತಿಸಿದರು. ಪ್ರಕಾಶ್ ಜೈನ್ ಪ್ರಾರ್ಥನೆ ಹಾಡಿದರು. ವಿ.ಬಿ.ಜಗದೀಶ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನ ಹಡಗಲಿ: ಸೋಲು- ಗೆಲುವು ಸಾಮಾನ್ಯ. ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹುಲುಗಪ್ಪ ಹೇಳಿದರು.<br /> <br /> ಪಟ್ಟಣದ ಜಿಪಿಜಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಯಶಾಲಿಗಳಾಗಿ ಜಿಲ್ಲಾಮಟ್ಟದಲ್ಲಿ ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಿ ಆಟವನ್ನಾಡಿ ಎಂದರು.<br /> <br /> ಪ್ರಗತಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರಾದ ಪರಮೇಶ್ವರಪ್ಪ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಆರೋಗ್ಯಕ್ಕೆ ಕ್ರೀಡಾಕೂಟಗಳು ಸಹಕಾರಿ ಯಾಗಿವೆ ಎಂದರು.<br /> <br /> ಆಟಗಳು ಮನುಷ್ಯನನ್ನು ಎತ್ತರಕ್ಕೆ ಬೆಳೆಸುತ್ತವೆ. ಎಲ್ಲ ಮಕ್ಕಳು ಉತ್ತಮ ಪ್ರದರ್ಶನ ನೀಡಿ ಯಶಸ್ಸಿನ ಕಡೆ ಹೆಜ್ಜೆ ಹಾಕಿ ಎಂದರು.<br /> <br /> ಜಿ.ಪಂ.ಸದಸ್ಯೆ ಶೋಭಾ ಬೆಂಡಿಗೇರಿ ಪ್ರತಿಜ್ಞಾನ ವಿಧಿ ಬೋಧಿಸಿದರು. ಜಿ.ಪಂ.ಸದಸ್ಯರಾದ ವಸಂತ ತಹಸೀ ಲ್ದಾರ್ ಬಸವರಾಜ ಸೋಮಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಪಾರಿ ಬಸವರಾಜ, ಜಿ.ಪಂ.ಸದಸ್ಯರಾದ ವಸಂತ, ನಳಿನಾ ವೀರಭದ್ರಪ್ಪ ಮಾತನಾಡಿದರು. <br /> <br /> ಪುರಸಭೆ ಅಧ್ಯಕ್ಷೆ ರೇಣುಕಮ್ಮ, ತಾ.ಪಂ.ಉಪಾಧ್ಯಕ್ಷೆ ಮಂಗಳಾ ಹಾಲೇಶ್, ಡಿ.ಮಲ್ಲೇಶ ನಾಯ್ಕ, ದೈಹಿಕ ಪರಿವೀಕ್ಷಕ ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಲ್.ವಿ.ಗುಡ್ಯಾ ನಾಯ್ಕ, ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ವತ್ಥನಾರಾಯಾಣ, ತಾಲ್ಲೂಕು ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಜಾತಪ್ಪ ಉಪಸ್ಥಿತರಿದ್ದರು.<br /> <br /> ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಾರಿ ಬಸವರಾಜ ಸ್ವಾಗತಿಸಿದರು. ಪ್ರಕಾಶ್ ಜೈನ್ ಪ್ರಾರ್ಥನೆ ಹಾಡಿದರು. ವಿ.ಬಿ.ಜಗದೀಶ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>