ಹೂವಿನಹಡಗಲಿ: ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ವೀರಭದ್ರೇಶ್ವರ ರಥೋತ್ಸವ ಅಂಗವಾಗಿ ಅಭಿಮಾನಿಗಳು ಅಳವಡಿಸಿದ್ದ ಚಿತ್ರನಟರ ಫ್ಲೆಕ್ಸ್, ಬ್ಯಾನರ್ ಅನ್ನು ಬುಧವಾರ ತೆರವುಗೊಳಿಸಿದ್ದರಿಂದ ಅಧಿಕಾರಿಗಳು ಮತ್ತು ಗ್ರಾಮದ ಯುವಕರ ನಡುವೆ ವಾಗ್ವಾದ ನಡೆದಿದೆ.ಜಾತ್ರೆ ಪ್ರಯುಕ್ತ ನಟರಾದ ಸುದೀಪ್, ದರ್ಶನ್, ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡ ಗಾತ್ರದ ಫ್ಲೆಕ್ಸ್ ಅಳವಡಿಸಿ, ವಿದ್ಯುತ್ ದೀಪಾಲಂಕಾರ ಮಾಡಿದ್ದರು.