ಹಗರಿಬೊಮ್ಮನಹಳ್ಳಿ: ಮಾಜಿ ಶಾಸಕ ಎಸ್. ಭೀಮಾನಾಯ್ಕ ಅವರ ಬೆಂಬಲಿಗರಾದ ಅಕ್ಕಿ ತೋಟೇಶ್, ಕನ್ನಿಹಳ್ಳಿ ಚಂದ್ರಶೇಖರ್ ಹಾಗೂ ಚಿಂತ್ರಪಳ್ಳಿ ದೇವೇಂದ್ರಪ್ಪ ಅವರು ಪಕ್ಷದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಂಗಳವಾರ ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.