<p>ಸಿರುಗುಪ್ಪ: ಜ್ಞಾನಕಾರ್ಯ ಮಾಡುವು ದರಿಂದ ಸಮಾಜದಲ್ಲಿ ಮಹತ್ತರ ಬದಲಾವಣೆ ತರಬಹುದೆಂದು ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು.<br /> <br /> ಪಟ್ಟಣದಲ್ಲಿ ಸೋಮವಾರ ರಾತ್ರಿ ವ್ಯಾಸ ವಿಜ್ಞಾನ ವೈಜಯಂತೀ ಜ್ಞಾನಸತ್ರ ಕಾರ್ಯಕ್ರಮದಲ್ಲಿ ವಸುಧೇಂದ್ರ ವೇದಿಕೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.<br /> <br /> ಭಗವಂತನ ನಾಮ ಸ್ಮರಣೆಯಿಂದ ಆತ್ಮಶುದ್ದಿಯಾಗುತ್ತದೆ, ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡುವುದರಿಂದ ಸದ್ಗುಣದ ಸುಗಂಧ ಬೀರಿ ಇತರರನ್ನು ಸದ್ಗುಣಿಗಳನ್ನಾಗಿ ಮಾಡುವ ಕೆಲಸ ಸ್ವಾರ್ಥಕ್ಕಾಗದೇ ಭಗವಂತನ ಪ್ರೀತಿಗಾಗಿ ಇರಲಿ ಎಂದು ನುಡಿದರು.<br /> <br /> ಇಲ್ಲಿ ಒಂದು ತಿಂಗಳ ಕಾಲ ಜ್ಞಾನಸತ್ರ ಕಾರ್ಯಕ್ರಮ ನಡೆಸುತ್ತಿರುವುದು ಪ್ರಶಂಸನೀಯ ಎಂದು ಶ್ರೀಗಳು ಸಂತಸ ವ್ಯಕ್ತಪಡಿಸಿದರು.<br /> <br /> ಶ್ರೀಗಳು ಇದೇ ಸಂಧರ್ಭದಲ್ಲಿ ಶ್ರೀಕೃಷ್ಣನ ಪೂಜೆ ನೆರವೇರಿಸಿದ ನಂತರ ತುಲಾಭಾರ ಸೇವೆ ನಡೆಯಿತು. ಪಟ್ಟಣಕ್ಕೆ ರಾತ್ರಿ ಆಗಮಿಸಿದಾಗ ಶ್ರೀಗಳನ್ನು ಶೋಭಾಯಾತ್ರೆ ಮೂಲಕ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳ ಲಾಯಿತು.<br /> <br /> ಗುರು ರಾಘವೇಂದ್ರ ಅಷ್ಟೋತ್ತರ ಮಂಡಳಿ ಅಧ್ಯಕ್ಷ ಎ.ಜೆ.ಸಂಜಯಾಚಾರ್, ವ್ಯಾಸ ವಿಜ್ಞಾನ ವೈಜಯಂತೀ ಸೇವಾ ಸಮಿತಿಯ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಸದಸ್ಯ ಬಿ.ಗುರುರಾಜಚಾರ್ ಮತ್ತು ವಿಪ್ರ ಬಾಂಧವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ಜ್ಞಾನಕಾರ್ಯ ಮಾಡುವು ದರಿಂದ ಸಮಾಜದಲ್ಲಿ ಮಹತ್ತರ ಬದಲಾವಣೆ ತರಬಹುದೆಂದು ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು.<br /> <br /> ಪಟ್ಟಣದಲ್ಲಿ ಸೋಮವಾರ ರಾತ್ರಿ ವ್ಯಾಸ ವಿಜ್ಞಾನ ವೈಜಯಂತೀ ಜ್ಞಾನಸತ್ರ ಕಾರ್ಯಕ್ರಮದಲ್ಲಿ ವಸುಧೇಂದ್ರ ವೇದಿಕೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.<br /> <br /> ಭಗವಂತನ ನಾಮ ಸ್ಮರಣೆಯಿಂದ ಆತ್ಮಶುದ್ದಿಯಾಗುತ್ತದೆ, ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡುವುದರಿಂದ ಸದ್ಗುಣದ ಸುಗಂಧ ಬೀರಿ ಇತರರನ್ನು ಸದ್ಗುಣಿಗಳನ್ನಾಗಿ ಮಾಡುವ ಕೆಲಸ ಸ್ವಾರ್ಥಕ್ಕಾಗದೇ ಭಗವಂತನ ಪ್ರೀತಿಗಾಗಿ ಇರಲಿ ಎಂದು ನುಡಿದರು.<br /> <br /> ಇಲ್ಲಿ ಒಂದು ತಿಂಗಳ ಕಾಲ ಜ್ಞಾನಸತ್ರ ಕಾರ್ಯಕ್ರಮ ನಡೆಸುತ್ತಿರುವುದು ಪ್ರಶಂಸನೀಯ ಎಂದು ಶ್ರೀಗಳು ಸಂತಸ ವ್ಯಕ್ತಪಡಿಸಿದರು.<br /> <br /> ಶ್ರೀಗಳು ಇದೇ ಸಂಧರ್ಭದಲ್ಲಿ ಶ್ರೀಕೃಷ್ಣನ ಪೂಜೆ ನೆರವೇರಿಸಿದ ನಂತರ ತುಲಾಭಾರ ಸೇವೆ ನಡೆಯಿತು. ಪಟ್ಟಣಕ್ಕೆ ರಾತ್ರಿ ಆಗಮಿಸಿದಾಗ ಶ್ರೀಗಳನ್ನು ಶೋಭಾಯಾತ್ರೆ ಮೂಲಕ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳ ಲಾಯಿತು.<br /> <br /> ಗುರು ರಾಘವೇಂದ್ರ ಅಷ್ಟೋತ್ತರ ಮಂಡಳಿ ಅಧ್ಯಕ್ಷ ಎ.ಜೆ.ಸಂಜಯಾಚಾರ್, ವ್ಯಾಸ ವಿಜ್ಞಾನ ವೈಜಯಂತೀ ಸೇವಾ ಸಮಿತಿಯ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಸದಸ್ಯ ಬಿ.ಗುರುರಾಜಚಾರ್ ಮತ್ತು ವಿಪ್ರ ಬಾಂಧವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>