<p><strong>ಹಗರಿಬೊಮ್ಮನಹಳ್ಳಿ: </strong>ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನವು ಗುರುವಾರ ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದ ಕಿನ್ನಾಳ್ ಪೊರಮಾಂಬೆ ಗುರುಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಿತ್ತು.<br /> <br /> ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲೆಯ ಮುಖ್ಯಗುರುಗಳಾದ ಎ.ಎಸ್. ಚವ್ಹಾಣ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ವಿಜ್ಞಾನ ಮೇಳಗಳ ಸದುಪಯೋಗ ಪಡೆಯಲು ಕೋರಿದರು. <br /> <br /> ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕ ಕೆ.ವಿ. ಲೋಕೇಶ್ ಉಪನ್ಯಾಸ ನೀಡಿ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುತ್ತವೆ. ಜೊತೆಗೆ ವಿಜ್ಞಾನ ಕುರಿತಂತೆ ಕುತೂಹಲ ಹಾಗೂ ವೈಚಾರಿಕ ಚಿಂತನೆಗಳು ವಿಕಸನವಾಗುತ್ತವೆ ಎಂದು ತಿಳಿಸಿದರು.<br /> <br /> ಪ್ರತಿಷ್ಠಾನದ ಕುಮಾರ್ ಹೆಳವರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಔಚಿತ್ಯ ವಿವರಿಸಿದರು. ಶಿಕ್ಷಕರಾದ ರಾಜೇಶ್ವರಿ, ಮುಸ್ತಾಕ್, ಕೋರಿ ದೊಡ್ಡಬಸಪ್ಪ, ರೆಡ್ಡಿ ನಾಯ್ಕ, ಪ್ರತಿಷ್ಠಾನದ ಮೆಹಬೂಬ್ಬಾಷಾ ನಾಗೇಶ್ ಉಪಸ್ಥಿತರಿದ್ದರು. ಶಿಕ್ಷಕ ಕಲ್ಗುಡಿ ಸ್ವಾಗತಿಸಿದರು. ಬಿ.ಎಸ್. ಮಾಧವ ಮತ್ತು ಎಸ್.ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ: </strong>ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನವು ಗುರುವಾರ ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದ ಕಿನ್ನಾಳ್ ಪೊರಮಾಂಬೆ ಗುರುಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಿತ್ತು.<br /> <br /> ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲೆಯ ಮುಖ್ಯಗುರುಗಳಾದ ಎ.ಎಸ್. ಚವ್ಹಾಣ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ವಿಜ್ಞಾನ ಮೇಳಗಳ ಸದುಪಯೋಗ ಪಡೆಯಲು ಕೋರಿದರು. <br /> <br /> ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕ ಕೆ.ವಿ. ಲೋಕೇಶ್ ಉಪನ್ಯಾಸ ನೀಡಿ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುತ್ತವೆ. ಜೊತೆಗೆ ವಿಜ್ಞಾನ ಕುರಿತಂತೆ ಕುತೂಹಲ ಹಾಗೂ ವೈಚಾರಿಕ ಚಿಂತನೆಗಳು ವಿಕಸನವಾಗುತ್ತವೆ ಎಂದು ತಿಳಿಸಿದರು.<br /> <br /> ಪ್ರತಿಷ್ಠಾನದ ಕುಮಾರ್ ಹೆಳವರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಔಚಿತ್ಯ ವಿವರಿಸಿದರು. ಶಿಕ್ಷಕರಾದ ರಾಜೇಶ್ವರಿ, ಮುಸ್ತಾಕ್, ಕೋರಿ ದೊಡ್ಡಬಸಪ್ಪ, ರೆಡ್ಡಿ ನಾಯ್ಕ, ಪ್ರತಿಷ್ಠಾನದ ಮೆಹಬೂಬ್ಬಾಷಾ ನಾಗೇಶ್ ಉಪಸ್ಥಿತರಿದ್ದರು. ಶಿಕ್ಷಕ ಕಲ್ಗುಡಿ ಸ್ವಾಗತಿಸಿದರು. ಬಿ.ಎಸ್. ಮಾಧವ ಮತ್ತು ಎಸ್.ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>