<p><strong>ಬಳ್ಳಾರಿ:</strong> ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆ ನೀಗಿಸಲು ತಾಲ್ಲೂಕಿನ ಕುಡುತಿನಿ ಗ್ರಾಮದ ಬಳಿ ಇರುವ ಬಳ್ಳಾರಿ ಶಾಖೋತ್ಪನ್ನ ಘಟಕದಲ್ಲಿ (ಬಿಟಿಪಿಎಸ್) ಕೈಗೆತ್ತಿಕೊಳ್ಳಲಾಗಿರುವ ದ್ವಿತೀಯ ಘಟಕದ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ, ಕೇಂದ್ರ ಸರ್ಕಾರ ಕಲ್ಲಿದ್ದಲು ನೀಡದಿರುವು ದರಿಂದ ವಿದ್ಯುತ್ ಉತ್ಪಾದನೆ ಮರೀಚಿಕೆಯಾಗಿದೆ.<br /> <br /> ದ್ವಿತೀಯ ಘಟಕದ ದೀಪ ಪ್ರಜ್ವಲನ ಪ್ರಕ್ರಿಯೆ ಆರು ತಿಂಗಳ ಹಿಂದೆಯೇ ಪೂರ್ಣಗೊಂಡಿದ್ದು, ಆಯಿಲ್ ಸಿಂಕ್ರನೈಸೇಷನ್ ಮೂಲಕ ಪ್ರಾಯೋಗಿಕ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಯೂ ಪೂರ್ಣಗೊಂಡಿದೆ. <br /> <br /> ನಿಗದಿಯಂತೆ ಡಿಸೆಂಬರ್ ಅಂತ್ಯಕ್ಕೆ ಪೂರ್ಣ ಪ್ರಮಾಣ ದಲ್ಲಿ ಆರಂಭವಾಗಬೇಕಿದ್ದ ವಿದ್ಯುತ್ ಉತ್ಪಾದನೆ ಕಾಮಗಾರಿಯ ವಿಳಂಬ ದಿಂದ ಮೂರು ತಿಂಗಳು ಮುಂದಕ್ಕೆ ಹೋಗಿತ್ತು. ಈಗ ಕಲ್ಲಿದ್ದಲು ಪೂರೈಕೆ ಕಾರಣ ಸೇರಿಕೊಂಡಿದೆ.<br /> <br /> 500 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಮೊದಲ ಘಟಕಕ್ಕೆ ನಿತ್ಯ ಸುಮಾರು 7,000 ಟನ್ ಕಲ್ಲಿದ್ದಲು ಅದನ್ನು ಮಹಾರಾಷ್ಟ್ರದ ನಾಗಪುರದ ಬಳಿ ಇರುವ ಗಣಿಗಳಿಂದ ಬರುತ್ತಿದೆ. ದ್ವಿತೀಯ ಘಟಕಕ್ಕೆ ಒಡಿಶಾದ ಮಹಾನದಿ ಗಣಿ ಪ್ರದೇಶದಿಂದ ಕಲ್ಲಿದ್ದಲು ಪೂರೈಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.<br /> <br /> ಆದರೆ, ಕೇಂದ್ರ ಸರ್ಕಾರ ಇದಕ್ಕೆ ಇನ್ನೂ ಅನುಮತಿ ನೀಡದಿರುವ ಕಾರಣ ಈವರೆಗೆ ಕಲ್ಲಿದ್ದಲು ಪೂರೈಕೆ ಆಗಿಲ್ಲ ಎಂದು ಬಿಟಿಪಿಎಸ್ ಅಧಿಕಾರಿಗಳು ಹೇಳುತ್ತಾರೆ.<br /> <br /> ಇತ್ತೀಚೆಗಷ್ಟೇ ನವದೆಹಲಿಗೆ ಭೇಟಿ ನೀಡಿದ್ದ ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರೊಂದಿಗೆ ಚರ್ಚಿಸಿ, ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಒದಗಿಸುವಂತೆ ಮನವಿ ಮಾಡಿದ್ದು, ಕೆಲವೇ ದಿನಗಳಲ್ಲಿ ಬೇಡಿಕೆ ಈಡೇರುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮದ ಮೂಲಗಳು ಹೇಳುತ್ತವೆ.<br /> <br /> ಬಿಟಿಪಿಎಸ್ ಆವರಣದಲ್ಲೇ ರೂ 3,100 ಕೋಟಿ ವೆಚ್ಚದ ಮೂರನೇ ಘಟಕದ ಕಾಮಗಾರಿಯನ್ನೂ ಕೈಗೆತ್ತಿ ಕೊಳ್ಳಲಾಗಿದ್ದು, ಮುಂದಿನ ಎರಡು ವರ್ಷದ ಅವಧಿಯಲ್ಲಿ ಮತ್ತೆ 700 ಮೆಗಾವಾಟ್ ಸಾಮರ್ಥ್ಯದ ಘಟಕ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆ ನೀಗಿಸಲು ತಾಲ್ಲೂಕಿನ ಕುಡುತಿನಿ ಗ್ರಾಮದ ಬಳಿ ಇರುವ ಬಳ್ಳಾರಿ ಶಾಖೋತ್ಪನ್ನ ಘಟಕದಲ್ಲಿ (ಬಿಟಿಪಿಎಸ್) ಕೈಗೆತ್ತಿಕೊಳ್ಳಲಾಗಿರುವ ದ್ವಿತೀಯ ಘಟಕದ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ, ಕೇಂದ್ರ ಸರ್ಕಾರ ಕಲ್ಲಿದ್ದಲು ನೀಡದಿರುವು ದರಿಂದ ವಿದ್ಯುತ್ ಉತ್ಪಾದನೆ ಮರೀಚಿಕೆಯಾಗಿದೆ.<br /> <br /> ದ್ವಿತೀಯ ಘಟಕದ ದೀಪ ಪ್ರಜ್ವಲನ ಪ್ರಕ್ರಿಯೆ ಆರು ತಿಂಗಳ ಹಿಂದೆಯೇ ಪೂರ್ಣಗೊಂಡಿದ್ದು, ಆಯಿಲ್ ಸಿಂಕ್ರನೈಸೇಷನ್ ಮೂಲಕ ಪ್ರಾಯೋಗಿಕ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಯೂ ಪೂರ್ಣಗೊಂಡಿದೆ. <br /> <br /> ನಿಗದಿಯಂತೆ ಡಿಸೆಂಬರ್ ಅಂತ್ಯಕ್ಕೆ ಪೂರ್ಣ ಪ್ರಮಾಣ ದಲ್ಲಿ ಆರಂಭವಾಗಬೇಕಿದ್ದ ವಿದ್ಯುತ್ ಉತ್ಪಾದನೆ ಕಾಮಗಾರಿಯ ವಿಳಂಬ ದಿಂದ ಮೂರು ತಿಂಗಳು ಮುಂದಕ್ಕೆ ಹೋಗಿತ್ತು. ಈಗ ಕಲ್ಲಿದ್ದಲು ಪೂರೈಕೆ ಕಾರಣ ಸೇರಿಕೊಂಡಿದೆ.<br /> <br /> 500 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಮೊದಲ ಘಟಕಕ್ಕೆ ನಿತ್ಯ ಸುಮಾರು 7,000 ಟನ್ ಕಲ್ಲಿದ್ದಲು ಅದನ್ನು ಮಹಾರಾಷ್ಟ್ರದ ನಾಗಪುರದ ಬಳಿ ಇರುವ ಗಣಿಗಳಿಂದ ಬರುತ್ತಿದೆ. ದ್ವಿತೀಯ ಘಟಕಕ್ಕೆ ಒಡಿಶಾದ ಮಹಾನದಿ ಗಣಿ ಪ್ರದೇಶದಿಂದ ಕಲ್ಲಿದ್ದಲು ಪೂರೈಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.<br /> <br /> ಆದರೆ, ಕೇಂದ್ರ ಸರ್ಕಾರ ಇದಕ್ಕೆ ಇನ್ನೂ ಅನುಮತಿ ನೀಡದಿರುವ ಕಾರಣ ಈವರೆಗೆ ಕಲ್ಲಿದ್ದಲು ಪೂರೈಕೆ ಆಗಿಲ್ಲ ಎಂದು ಬಿಟಿಪಿಎಸ್ ಅಧಿಕಾರಿಗಳು ಹೇಳುತ್ತಾರೆ.<br /> <br /> ಇತ್ತೀಚೆಗಷ್ಟೇ ನವದೆಹಲಿಗೆ ಭೇಟಿ ನೀಡಿದ್ದ ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರೊಂದಿಗೆ ಚರ್ಚಿಸಿ, ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಒದಗಿಸುವಂತೆ ಮನವಿ ಮಾಡಿದ್ದು, ಕೆಲವೇ ದಿನಗಳಲ್ಲಿ ಬೇಡಿಕೆ ಈಡೇರುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮದ ಮೂಲಗಳು ಹೇಳುತ್ತವೆ.<br /> <br /> ಬಿಟಿಪಿಎಸ್ ಆವರಣದಲ್ಲೇ ರೂ 3,100 ಕೋಟಿ ವೆಚ್ಚದ ಮೂರನೇ ಘಟಕದ ಕಾಮಗಾರಿಯನ್ನೂ ಕೈಗೆತ್ತಿ ಕೊಳ್ಳಲಾಗಿದ್ದು, ಮುಂದಿನ ಎರಡು ವರ್ಷದ ಅವಧಿಯಲ್ಲಿ ಮತ್ತೆ 700 ಮೆಗಾವಾಟ್ ಸಾಮರ್ಥ್ಯದ ಘಟಕ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>