<p><strong>ಹೊಸಪೇಟೆ: </strong>`ಪ್ರತಿಯೊಂದು ಸಮಾಜ ತನ್ನ ಇತಿಹಾಸ ಮತ್ತು ಸಂಸ್ಕೃತಿಗೆ ಧಕ್ಕೆಯಾಗದಂತೆ ಅದರ ಮೌಲ್ಯಗಳನ್ನು ಗಟ್ಟಿ ಗೊಳಿಸುವ ಕಾರ್ಯದಲ್ಲಿ ಕ್ರಿಯಾಶೀಲವಾಗಿ ಇರಬೇಕಾಗಿ ರುವುದು ಅನಿವಾರ್ಯ~ವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಮುರಿಗೆಪ್ಪ ಹೇಳಿದರು. <br /> <br /> ಹಂಪಿ ಕನ್ನಡ ವಿಶ್ವವಿದ್ಯಾಲಯದ ಭುವನವಿಜಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ `ಕಮಲಾಪುರದ ಬೇಡ ನಾಯಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು~ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಹೇಳಬೇಕಾದ ನಾಯಕ ಸಮುದಾಯ ಶೌರ್ಯ ಹಾಗೂ ಪರಾಕ್ರಮಗಳ ಮೂಲಕ ಇತಿಹಾಸದಲ್ಲಿ ತನ್ನ ಹಿರಿಮೆಯನ್ನು ಪ್ರದರ್ಶಿಸಿದ್ದು ಇಂತಹ ಇತಿಹಾಸ ಮರುಕಳಿಸಬೇಕಾಗಿದೆ ಎಂದರು.<br /> <br /> ಇಂದು ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಗಳಿಗೆ ಕೇವಲ ಸರ್ಕಾರವನ್ನು ನಂಬಿ ಕುಳಿತುಕೊಳ್ಳದೆ ಸಮುದಾಯದ ಪರಿಸ್ಥಿತಿ ಅರಿತು ಅವುಗಳ ಪರಿಹಾರಕ್ಕೆ ಮಾರ್ಗೋಪಾಯ ಗಳನ್ನು ಕಂಡುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. <br /> <br /> ಕಾರ್ಯಕ್ರಮ ಉದ್ಘಾಟಿಸಿದ ವಾಲ್ಮೀಕಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ ಹರ್ತಿಕೋಟಿ ವೀರೇಂದ್ರಸಿಂಹ ಮಾತನಾಡಿ `ಸಮುದಾಯಕ್ಕೆ ಅನೇಕ ಅವಕಾಶಗಳಿದ್ದು ಆಂತರಿಕ ಕಲಹಗಳಿಂದ ಹೊರಬಂದು ಒಗ್ಗಟ್ಟಿನಿಂದ ಸಮಾಜದ ಸ್ಥಿತಿಗತಿಗಳನ್ನು ಅರಿತು ಭವಿಷ್ಯತ್ತಿನಲ್ಲಿ ಹೇಗಿರಬೇಕು? ಎಂಬುವುದನ್ನು ಚಿಂತಿಸುವ ಮೂಲಕ ಸಮುದಾಯದ ಹಿರಿಮೆಯನ್ನು ಎತ್ತಿಹಿಡಿಯಬೇಕು~ ಎಂದರು. <br /> <br /> ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಜಂಬಯ್ಯ ನಾಯಕ್, ವಾಲ್ಮೀಕಿ ಜಾೃಗತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗುಜ್ಜಲ್ ನಾಗರಾಜ ಮಾತನಾಡಿ, ಸಮುದಾಯದ ಪ್ರಗತಿಗೆ ವಿಶ್ವವಿದ್ಯಾಲಯ ಯೋಜನೆ ರೂಪಿಸುವಂತೆ ಆಗ್ರಹಿಸಿದರು. <br /> <br /> ಡಾ.ಎಚ್.ಡಿ.ಪ್ರಶಾಂತ ನಿರ್ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಚಾಲಕ ಡಾ.ತಾರಿಹಳ್ಳಿ ಹನುಮಂತಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬದಲಾವಣೆಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>`ಪ್ರತಿಯೊಂದು ಸಮಾಜ ತನ್ನ ಇತಿಹಾಸ ಮತ್ತು ಸಂಸ್ಕೃತಿಗೆ ಧಕ್ಕೆಯಾಗದಂತೆ ಅದರ ಮೌಲ್ಯಗಳನ್ನು ಗಟ್ಟಿ ಗೊಳಿಸುವ ಕಾರ್ಯದಲ್ಲಿ ಕ್ರಿಯಾಶೀಲವಾಗಿ ಇರಬೇಕಾಗಿ ರುವುದು ಅನಿವಾರ್ಯ~ವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಮುರಿಗೆಪ್ಪ ಹೇಳಿದರು. <br /> <br /> ಹಂಪಿ ಕನ್ನಡ ವಿಶ್ವವಿದ್ಯಾಲಯದ ಭುವನವಿಜಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ `ಕಮಲಾಪುರದ ಬೇಡ ನಾಯಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು~ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಹೇಳಬೇಕಾದ ನಾಯಕ ಸಮುದಾಯ ಶೌರ್ಯ ಹಾಗೂ ಪರಾಕ್ರಮಗಳ ಮೂಲಕ ಇತಿಹಾಸದಲ್ಲಿ ತನ್ನ ಹಿರಿಮೆಯನ್ನು ಪ್ರದರ್ಶಿಸಿದ್ದು ಇಂತಹ ಇತಿಹಾಸ ಮರುಕಳಿಸಬೇಕಾಗಿದೆ ಎಂದರು.<br /> <br /> ಇಂದು ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಗಳಿಗೆ ಕೇವಲ ಸರ್ಕಾರವನ್ನು ನಂಬಿ ಕುಳಿತುಕೊಳ್ಳದೆ ಸಮುದಾಯದ ಪರಿಸ್ಥಿತಿ ಅರಿತು ಅವುಗಳ ಪರಿಹಾರಕ್ಕೆ ಮಾರ್ಗೋಪಾಯ ಗಳನ್ನು ಕಂಡುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. <br /> <br /> ಕಾರ್ಯಕ್ರಮ ಉದ್ಘಾಟಿಸಿದ ವಾಲ್ಮೀಕಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ ಹರ್ತಿಕೋಟಿ ವೀರೇಂದ್ರಸಿಂಹ ಮಾತನಾಡಿ `ಸಮುದಾಯಕ್ಕೆ ಅನೇಕ ಅವಕಾಶಗಳಿದ್ದು ಆಂತರಿಕ ಕಲಹಗಳಿಂದ ಹೊರಬಂದು ಒಗ್ಗಟ್ಟಿನಿಂದ ಸಮಾಜದ ಸ್ಥಿತಿಗತಿಗಳನ್ನು ಅರಿತು ಭವಿಷ್ಯತ್ತಿನಲ್ಲಿ ಹೇಗಿರಬೇಕು? ಎಂಬುವುದನ್ನು ಚಿಂತಿಸುವ ಮೂಲಕ ಸಮುದಾಯದ ಹಿರಿಮೆಯನ್ನು ಎತ್ತಿಹಿಡಿಯಬೇಕು~ ಎಂದರು. <br /> <br /> ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಜಂಬಯ್ಯ ನಾಯಕ್, ವಾಲ್ಮೀಕಿ ಜಾೃಗತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗುಜ್ಜಲ್ ನಾಗರಾಜ ಮಾತನಾಡಿ, ಸಮುದಾಯದ ಪ್ರಗತಿಗೆ ವಿಶ್ವವಿದ್ಯಾಲಯ ಯೋಜನೆ ರೂಪಿಸುವಂತೆ ಆಗ್ರಹಿಸಿದರು. <br /> <br /> ಡಾ.ಎಚ್.ಡಿ.ಪ್ರಶಾಂತ ನಿರ್ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಚಾಲಕ ಡಾ.ತಾರಿಹಳ್ಳಿ ಹನುಮಂತಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬದಲಾವಣೆಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>