‘ಅಂಜೂರದ ಗಿಡಗಳು 11 ವರ್ಷ ಹಳೆಯದಾದ ಕಾರಣ ಇಳುವರಿ ಗಣನೀಯವಾಗಿ ಕುಸಿದಿತ್ತು. ಜೊತೆಗೆ ಖರ್ಚು ಹೆಚ್ಚಾಗುತ್ತಿರುವುದನ್ನು ಮನಗಂಡು, ಯಾವ ಬೆಳೆ ಬೆಳೆದರೆ ಸೂಕ್ತ ಎಂದು ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಬಸವಣ್ಣೆಪ್ಪ ಅವರನ್ನು ಸಂಪರ್ಕಿಸಿದೆ. ಅವರು ಮೆಕ್ಕೆ ಜೋಳ ಬೆಳೆಯುವಂತೆ ಸಲಹೆ ನೀಡಿದರು’ ಎಂದು ಬಸವರಾಜ ‘ಪ್ರಜಾವಾಣಿ’ಗೆ ತಿಳಿಸಿದರು.