<p><strong>ಹೂವಿನಹಡಗಲಿ: </strong>ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ತಾ.ಪಂ. ನೂತನ ಅಧ್ಯಕ್ಷರಾಗಿ ಹುಲುಗಪ್ಪ ಆಯ್ಕೆಯಾಗಿದ್ದಾರೆ. <br /> <br /> ಸಹಾಯಕ ಆಯುಕ್ತ ಅಶೋಕ್ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ 12.30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಕವಿತಾ ಹೂಗಾರ ಮತ್ತು ಹುಲುಗಪ್ಪ ಅವರಿಂದ ನಾಮಪತ್ರಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಿತು. ಹುಲುಗಪ್ಪ 12ಮತ ಪಡೆದರೆ, ಕವಿತಾ ಹೂಗಾರ 2 ಮತ ಗಳಿಸಿದರು.<br /> <br /> ತಾ.ಪಂ. ಅಧ್ಯಕ್ಷರ ಆಯ್ಕೆ ಕಳೆದ 26ರಂದು ನಡೆಯಬೇಕಿತ್ತು. ನಾಮಪತ್ರ ಸಲ್ಲಿಕೆಯ ಗೊಂದಲದಿಂದ ಅಧ್ಯಕ್ಷರ ಚುನವಣೆಯನ್ನು ಮಾರ್ಚ್ 29ಕ್ಕೆ ಮೂಂದೂಡಲಾಗಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಪ್ರತಿಷ್ಠೆಯ ಕಣವಾಗಿದ್ದ ಈ ಹುದ್ದೆಯನ್ನೇರಲು ನಡೆದ ಕಸರತ್ತುಗಳು, ಅದಕ್ಕೆ ತೆರೆಮರೆಯಲ್ಲಿ ನಡೆದ ಪ್ರಕ್ರಿಯೆಗಳ ಕಾರಣ 29ರಂದು ಮತ್ತೆಚುನಾವಣೆ ಮುಂದೂಡಲ್ಪಟ್ಟಿತು. <br /> <br /> ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಾ.ಪಂ.ಸದಸ್ಯರ ಬೆಂಬಲದೊಂದಿಗೆ ಹುಲುಗಪ್ಪ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾದರು.<br /> <br /> ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಅಶೋಕ್, ಪ್ರಭಾರಿ ತಹಶೀಲ್ದಾರ್ ವೀರಮಲ್ಲಪ್ಪ ಪೂಜಾರ್, ತಾ.ಪಂ.ಉಪಾಧ್ಯಕ್ಷರಾದ ಉಪಾಧ್ಯಕ್ಷೆ ಸಾವಿತ್ರಮ್ಮ ಮಂಜುನಾಥ. ಸ್ಥಾಯಿ ಸಮಿತಿ ಅಧ್ಯಕ್ಷ ಐಗೋಳ್ ಚಿದಾನಂದ, ತಾ.ಪಂ.ಸದಸ್ಯರು ಹಾಗೂ ಮುಖಂಡರು, ಅಭಿಮಾನಿಗಳು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.<br /> <br /> ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಅಧ್ಯಕ್ಷರ ಆಯ್ಕೆಯನ್ನು ಘೋಷಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. <br /> <br /> ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಮಧ್ಯಾಹ್ನದವರೆಗೂ ವಾತಾವರಣ ಬಿಗುವಿನಿಂದ ಕೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ತಾ.ಪಂ. ನೂತನ ಅಧ್ಯಕ್ಷರಾಗಿ ಹುಲುಗಪ್ಪ ಆಯ್ಕೆಯಾಗಿದ್ದಾರೆ. <br /> <br /> ಸಹಾಯಕ ಆಯುಕ್ತ ಅಶೋಕ್ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ 12.30ಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಕವಿತಾ ಹೂಗಾರ ಮತ್ತು ಹುಲುಗಪ್ಪ ಅವರಿಂದ ನಾಮಪತ್ರಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಿತು. ಹುಲುಗಪ್ಪ 12ಮತ ಪಡೆದರೆ, ಕವಿತಾ ಹೂಗಾರ 2 ಮತ ಗಳಿಸಿದರು.<br /> <br /> ತಾ.ಪಂ. ಅಧ್ಯಕ್ಷರ ಆಯ್ಕೆ ಕಳೆದ 26ರಂದು ನಡೆಯಬೇಕಿತ್ತು. ನಾಮಪತ್ರ ಸಲ್ಲಿಕೆಯ ಗೊಂದಲದಿಂದ ಅಧ್ಯಕ್ಷರ ಚುನವಣೆಯನ್ನು ಮಾರ್ಚ್ 29ಕ್ಕೆ ಮೂಂದೂಡಲಾಗಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಪ್ರತಿಷ್ಠೆಯ ಕಣವಾಗಿದ್ದ ಈ ಹುದ್ದೆಯನ್ನೇರಲು ನಡೆದ ಕಸರತ್ತುಗಳು, ಅದಕ್ಕೆ ತೆರೆಮರೆಯಲ್ಲಿ ನಡೆದ ಪ್ರಕ್ರಿಯೆಗಳ ಕಾರಣ 29ರಂದು ಮತ್ತೆಚುನಾವಣೆ ಮುಂದೂಡಲ್ಪಟ್ಟಿತು. <br /> <br /> ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಾ.ಪಂ.ಸದಸ್ಯರ ಬೆಂಬಲದೊಂದಿಗೆ ಹುಲುಗಪ್ಪ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾದರು.<br /> <br /> ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಅಶೋಕ್, ಪ್ರಭಾರಿ ತಹಶೀಲ್ದಾರ್ ವೀರಮಲ್ಲಪ್ಪ ಪೂಜಾರ್, ತಾ.ಪಂ.ಉಪಾಧ್ಯಕ್ಷರಾದ ಉಪಾಧ್ಯಕ್ಷೆ ಸಾವಿತ್ರಮ್ಮ ಮಂಜುನಾಥ. ಸ್ಥಾಯಿ ಸಮಿತಿ ಅಧ್ಯಕ್ಷ ಐಗೋಳ್ ಚಿದಾನಂದ, ತಾ.ಪಂ.ಸದಸ್ಯರು ಹಾಗೂ ಮುಖಂಡರು, ಅಭಿಮಾನಿಗಳು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.<br /> <br /> ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಅಧ್ಯಕ್ಷರ ಆಯ್ಕೆಯನ್ನು ಘೋಷಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. <br /> <br /> ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಮಧ್ಯಾಹ್ನದವರೆಗೂ ವಾತಾವರಣ ಬಿಗುವಿನಿಂದ ಕೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>