<p><strong>ಬಳ್ಳಾರಿ: </strong>ದೇಶದಾದ್ಯಂತ ವಿಶೇಷ ಸ್ಥಾನ ಹೊಂದಿರುವ ಕನ್ನಡದ ರಂಗಭೂಮಿಯು ಹೊಸ ಹೊಸ ಪ್ರಯೋಗಗಳ ಮೂಲಕ ಹೆಸರಾಗಿದೆ ಎಂದು ಶಕ್ತಿನಗರದ ರಂಗಸಂಘಟಕ ನಾಗಭೂಷಣ ನಾಗಳ್ಳಿ ತಿಳಿಸಿದರು.<br /> <br /> ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ರಂಗಜಂಗಮ ಸಾಂಸ್ಕೃತಿಕ ಸಂಘಟನೆ ಹಮ್ಮಿಕೊಂಡಿದ್ದ ಮಕ್ಕಳ ನಾಟಕೋತ್ಸವದಲ್ಲಿ ಅವರು ರಂಗಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.<br /> ಆಗಾಧ ಪ್ರತಿಭೆ ಹೊಂದಿರುವ ಮಕ್ಕಳಲ್ಲಿ ರಂಗಭೂಮಿಯ ಆಸಕ್ತಿ ಬೆಳೆಸುವ ಕೆಲಸ ಆಗಬೇಕಿದೆ ಎಂದು ಅವರು ಹೇಳಿದರು.</p>.<p>ಮಕ್ಕಳಿಗೆ ಕಲಿಕೆಯ ಹಂತದಲ್ಲೇ ರಂಗಭೂಮಿ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಜಿಲ್ಲೆಯು ರಂಗಭೂಮಿ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದು, ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮನ್ಸೂರ್ ಸೇರಿದಂತೆ ಹಲವರು ರಂಗಭೂಮಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಪತ್ರಕರ್ತ ಸಿ.ಮಂಜುನಾಥ ತಿಳಿಸಿದರು.<br /> <br /> ಮಕ್ಕಳು ಸದಾ ಚಟುವಟಿಕೆಯಿಂದ ಇರಲು ನಾಟಕ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿ ವರ್ಷವೂ ಮಕ್ಕಳ ನಾಟಕಕೋತ್ಸವ ಆಯೋಜಿಸಬೇಕು ಎಂದು ಡಾ.ಅರವಿಂದ ಪಾಟೀಲ್ ಸಲಹೆ ನೀಡಿದರು.<br /> ಚಿತ್ರದುರ್ಗದ ರಂಗನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು.<br /> <br /> ಕಟ್ಟೇಗೌಡ, ಬಸವನಗೌಡ, ಜೋಳದರಾಶಿ ಪಂಪನಗೌಡ, ರಂಗಜಂಗಮ ಸಂಘಟನೆ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ, ವೈ.ದೊಡ್ಡಬಸಪ್ಪ, ಅಣ್ಣಾಜಿ ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು. ಅಮಾತಿ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ದೇಶದಾದ್ಯಂತ ವಿಶೇಷ ಸ್ಥಾನ ಹೊಂದಿರುವ ಕನ್ನಡದ ರಂಗಭೂಮಿಯು ಹೊಸ ಹೊಸ ಪ್ರಯೋಗಗಳ ಮೂಲಕ ಹೆಸರಾಗಿದೆ ಎಂದು ಶಕ್ತಿನಗರದ ರಂಗಸಂಘಟಕ ನಾಗಭೂಷಣ ನಾಗಳ್ಳಿ ತಿಳಿಸಿದರು.<br /> <br /> ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ರಂಗಜಂಗಮ ಸಾಂಸ್ಕೃತಿಕ ಸಂಘಟನೆ ಹಮ್ಮಿಕೊಂಡಿದ್ದ ಮಕ್ಕಳ ನಾಟಕೋತ್ಸವದಲ್ಲಿ ಅವರು ರಂಗಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.<br /> ಆಗಾಧ ಪ್ರತಿಭೆ ಹೊಂದಿರುವ ಮಕ್ಕಳಲ್ಲಿ ರಂಗಭೂಮಿಯ ಆಸಕ್ತಿ ಬೆಳೆಸುವ ಕೆಲಸ ಆಗಬೇಕಿದೆ ಎಂದು ಅವರು ಹೇಳಿದರು.</p>.<p>ಮಕ್ಕಳಿಗೆ ಕಲಿಕೆಯ ಹಂತದಲ್ಲೇ ರಂಗಭೂಮಿ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಜಿಲ್ಲೆಯು ರಂಗಭೂಮಿ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದು, ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮನ್ಸೂರ್ ಸೇರಿದಂತೆ ಹಲವರು ರಂಗಭೂಮಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಪತ್ರಕರ್ತ ಸಿ.ಮಂಜುನಾಥ ತಿಳಿಸಿದರು.<br /> <br /> ಮಕ್ಕಳು ಸದಾ ಚಟುವಟಿಕೆಯಿಂದ ಇರಲು ನಾಟಕ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿ ವರ್ಷವೂ ಮಕ್ಕಳ ನಾಟಕಕೋತ್ಸವ ಆಯೋಜಿಸಬೇಕು ಎಂದು ಡಾ.ಅರವಿಂದ ಪಾಟೀಲ್ ಸಲಹೆ ನೀಡಿದರು.<br /> ಚಿತ್ರದುರ್ಗದ ರಂಗನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು.<br /> <br /> ಕಟ್ಟೇಗೌಡ, ಬಸವನಗೌಡ, ಜೋಳದರಾಶಿ ಪಂಪನಗೌಡ, ರಂಗಜಂಗಮ ಸಂಘಟನೆ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ, ವೈ.ದೊಡ್ಡಬಸಪ್ಪ, ಅಣ್ಣಾಜಿ ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು. ಅಮಾತಿ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>