ಬೆಂಗಳೂರು: ಇಸ್ಕಾನ್ನ ‘ಅಕ್ಷಯ ಪಾತ್ರ’ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಮಧು ಪಂಡಿತ್ ದಾಸ್, ಸಾಮಾಜಿಕ ಅಸಮಾನತೆ ತೊಡೆದು ಹಾಕಲು ವಿಶಿಷ್ಟ ವಿಧಾನಗಳನ್ನು ಬಳಸಿ ಯಶಸ್ವಿಯಾದ ಸಮಾಜ ಸೇವಕ ಎಂ.ಎಸ್. ಮುತ್ತುರಾಜ್,ದೃಶ್ಯಕಲೆ ಕ್ಷೇತ್ರಕ್ಕೆ ಪ್ರಮುಖ ಕೊಡುಗೆ ನೀಡಿದ ಕಲಾವಿದ ಎಸ್.ಜಿ.ವಾಸುದೇವ್ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.