‘ವಿಜಯ ಬ್ಯಾಂಕ್, ಕೊಟಕ್ ಮಹಿಂದ್ರಾ ಬ್ಯಾಂಕಿನ ಮುಂದೆ ಜನರು ಪ್ರತಿನಿತ್ಯ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇದು ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಪ್ರಕ್ರಿಯೆ. ಸಂಬಂಧಪಟ್ಟವರು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ದಿನಬೆಳಗಾದರೆ ಕೊರೆಯುವ ಚಳಿಯಲ್ಲಿ ಸಣ್ಣ ಮಕ್ಕಳನ್ನು ಎತ್ತಿಕೊಂಡು ಬಂದು ಮಹಿಳೆಯರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ನೂರಾರು ಮಂದಿ ಬಂದು ಬ್ಯಾಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ’ ಎಂದರು.