ನಾಗರಹೊಳೆ ಅರಣ್ಯದಂಚಿನ ಕೊಟ್ಟಗೇರಿ ಗ್ರಾಮದ ಕಾಫಿ ತೋಟದಲ್ಲಿ ಗುರುವಾರ ರಾತ್ರಿ ಹುಲಿ ಸುಳಿದಾಡುತ್ತಿರುವುದು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಗೋಚರಿಸಿತ್ತು. ವಿರಾಜಪೇಟೆ ಉಪಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜ್, ತಿತಿಮತಿ ಎಸಿಎಫ್ ಶ್ರೀಪತಿ, ನಾಗರಹೊಳೆ ಎಸಿಎಫ್ ಪೌಲ್ ಅಂಟೋನಿ, ಮತ್ತಿಗೋಡು ಆರ್ಎಫ್ಒ ಕಿರಣ್ಕುಮಾರ್, ಪೊನ್ನಂಪೇಟೆ ಆರ್ಎಫ್ಒ ಗಂಗಾಧರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್ಟಿಪಿಎಫ್ ತಂಡ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 40 ಮಂದಿ ಪಾಲ್ಗೊಂಡಿದ್ದರು.