‘ಹೊಸಕೋಟೆ ಮತ್ತು ಸೂಲಿಬೆಲೆ ವ್ಯಾಪ್ತಿಯಲ್ಲಿನ ಹೆದ್ದಾರಿ ರಸ್ತೆ ಹೊರತುಪಡಿಸಿ ಸಂಪರ್ಕ ಕಲ್ಪಿಸುವ ಇತರ ರಸ್ತೆಗಳ ಮೂಲಕ ರಕ್ತಚಂದನ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳಿಗೆ ವಿಷಯ ತಿಳಿಸಲಾಗಿತ್ತು. ದೇವನಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಅಯುಕ್ತ ಪಿ.ಟಿ.ಸುಬ್ರಮಣ್ಯ ನೇತೃತ್ವದಲ್ಲಿ ದೇವನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದರಾಜು, ಸಬ್ ಇನ್ಸ್ಪೆಕ್ಟರ್ ನಾಗರಾಜು, ಸಿಬ್ಬಂದಿ ಶ್ರೀನಿವಾಸ್ ರಾವ್, ವಿಜಯ ಕುಮಾರ್ ನಾಯಕ್, ತೈಯಬಹೊಂಗಲ, ಪಾಂಡುರಂಗ ಅವರಿದ್ದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆ ತಂಡಕ್ಕೆ ₹ 10 ಸಾವಿರ ಬಹುಮಾನ ಘೋಷಿಸಲಾಗಿದೆ’ ಎಂದು ಹೇಳಿದರು.