<p><strong>ಆನೇಕಲ್: </strong>ಹೊನ್ನಕಲಶಾಪುರ ಗ್ರಾಮದ ಗೋಪಿ ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ದರ್ಶನ್, ಲಿಖಿತ್, ನಿಖಿಲ್, ತೇಜಸ್, ಪ್ರಶಾಂತ್, ಲಿಖಿತ್ ಬಂಧಿತರು. ಆರೋಪಿಗಳು ಗೋಪಿಯನ್ನು ಕೊಲೆ ಮಾಡಿ ಡೆಂಕಣಿಕೋಟೆ ಬಳಿ ಎಸೆದು ಹೋಗಿದ್ದರಿಂದ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆನೇಕಲ್ ಪೊಲೀಸರು ಆರೋಪಿಗಳ ಪತ್ತೆಗೆ 7 ತಂಡ ರಚಿಸಿದ್ದರು. ತಮಿಳುನಾಡಿನ ಹೊಗನೇಕಲ್ ಬಳಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ವಾಹನಗಳಲ್ಲಿ ಪರಾರಿಯಾಗುತ್ತಿದ್ದಾಗ ತಮಿಳುನಾಡು ಪೊಲೀಸರು ಬಂಧಿಸಿ ಪೋಚಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.</p>.<p>ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ವಾಹನ ಚಾಲಕ ರಘುನನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯ ಸೂತ್ರಧಾರ ಮೋಹನ್ಬಾಬುನನ್ನು ಪೊಲೀಸರು ವಿಚಾರಣೆ ನಡೆಸಿದ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಹೊನ್ನಕಲಶಾಪುರ ಗ್ರಾಮದ ಗೋಪಿ ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ದರ್ಶನ್, ಲಿಖಿತ್, ನಿಖಿಲ್, ತೇಜಸ್, ಪ್ರಶಾಂತ್, ಲಿಖಿತ್ ಬಂಧಿತರು. ಆರೋಪಿಗಳು ಗೋಪಿಯನ್ನು ಕೊಲೆ ಮಾಡಿ ಡೆಂಕಣಿಕೋಟೆ ಬಳಿ ಎಸೆದು ಹೋಗಿದ್ದರಿಂದ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆನೇಕಲ್ ಪೊಲೀಸರು ಆರೋಪಿಗಳ ಪತ್ತೆಗೆ 7 ತಂಡ ರಚಿಸಿದ್ದರು. ತಮಿಳುನಾಡಿನ ಹೊಗನೇಕಲ್ ಬಳಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ವಾಹನಗಳಲ್ಲಿ ಪರಾರಿಯಾಗುತ್ತಿದ್ದಾಗ ತಮಿಳುನಾಡು ಪೊಲೀಸರು ಬಂಧಿಸಿ ಪೋಚಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.</p>.<p>ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ವಾಹನ ಚಾಲಕ ರಘುನನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯ ಸೂತ್ರಧಾರ ಮೋಹನ್ಬಾಬುನನ್ನು ಪೊಲೀಸರು ವಿಚಾರಣೆ ನಡೆಸಿದ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>