ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ ಮಾತನಾಡಿ, ‘ಸದ್ಯ ಯಾವುದೇ ಅವಘಡ ಆಗಿಲ್ಲ, ಮಕ್ಕಳೆಲ್ಲ ಸಹಜ ಸ್ಥಿತಿಗೆ ಮರಳಿದ್ದಾರೆ, ಈಗಾಗಲೇ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಕೇಕ್ ಎಲ್ಲಿಂದ ಖರೀದಿಸಿದ್ದರು ಎಂದು ತಿಳಿದುಕೊಂಡು ಅದರ ಗುಣಮಟ್ಟದ ಪರಿಶೀಲನೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಪೋಷಕರ ಕೋರಿಕೆ ಮೇರೆಗೆ ಪೊಲೀಸ್ ಠಾಣೆಗೆ ದೂರು ನೀಡಿಲ್ಲ’ ಎಂದು ಹೇಳಿದರು.