ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ 14 ಹಾವು, 4 ಸಸ್ತನಿ ರಕ್ಷಣೆ

Last Updated 27 ಜನವರಿ 2023, 21:36 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 4 ಜನ ಪ್ರಯಾಣಿಕರ ತಂಡ ಅಕ್ರಮವಾಗಿ ಹಾವುಗಳು ಹಾಗೂ ಸಸ್ತನಿ‌ ಪ್ರಾಣಿಗಳನ್ನು ಕಳ್ಳ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಬ್ಯಾಂಕಾಕ್‌ನಿಂದ ಕಾಡು ಪ್ರಾಣಿಗಳ ಪ್ರವರ್ಗಕ್ಕೆ ಸೇರುವ ಹಾವು, ಸಸ್ತನಿಗಳನ್ನು ಕಳ್ಳ‌ಸಾಗಣೆ ಮಾಡುತ್ತಿರುವುದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳ ಕಾರ್ಯಾಚರಣೆ ವೇಳೆ ಈ ಕೃತ್ಯ ಜ.22 ರಂದು ಪತ್ತೆಯಾಗಿದೆ.

ವಿಮಾನ ನಿಲ್ದಾಣದ‌ ಚಕ್‌ಇನ್ ಬ್ಯಾಗ್‌ನಲ್ಲಿ‌ ಹಾವುಗಳನ್ನು ಇರಿಸಿಕೊಂಡು ಬಂದಿದ್ದರು. ತಕ್ಷಣವೇ ಆರೋಪಿಗಳಿಂದ ವಶಕ್ಕೆ ಪಡೆದ ಹಾವುಗಳನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಅವುಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸ್ಥಳಾಂತರಿಸಲಾಗಿದೆ.

ಪ್ರಕರಣದಲ್ಲಿ ಓರ್ವ‌ ಮಹಿಳೆ ಸೇರಿದಂತೆ ಇಬ್ಬರು ಯುವಕರನ್ನು ಬಂಧಿಸಿದ್ದು, ತನಿಖೆ ವೇಳೆ ಬೆಂಗಳೂರು ಹೊರ ವಲಯದ ಫಾರ್ಮ್ ಹೌಸ್‌ನಲ್ಲಿ ಕಳ್ಳ ಸಾಗಣೆ ಮಾಡಿದ್ದ ಒಟ್ಟು 139 ಕಾಡು ಪ್ರಾಣಿಗಳು ಪತ್ತೆಯಾಗಿದ್ದು, ಅದರಲ್ಲಿ ವಿವಿಧ ಜಾತಿಯ ಕೋತಿ, ಪಕ್ಷಿಗಳು, ಅನಕೊಂಡ ಹಾವುಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT