ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತು ಬರುವ ಅಹವಾಲು ಆಲಿಕೆ ಮತ್ತು ಮಜಲು ವಾಹನಗಳ ರಹದಾರಿ ಮಾರ್ಗ ಕುರಿತು ಚರ್ಚಿಸಲಾಗುವುದು. ಆಸಕ್ತರು ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತ ಅಹವಾಲುಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.