ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಂದು ಸಾರಿಗೆ ಪ್ರಾಧಿಕಾರದ ಸಭೆ

Last Updated 14 ಏಪ್ರಿಲ್ 2022, 6:24 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ನಡೆಯಲಿದೆ.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತು ಬರುವ ಅಹವಾಲು ಆಲಿಕೆ ಮತ್ತು ಮಜಲು ವಾಹನಗಳ ರಹದಾರಿ ಮಾರ್ಗ ಕುರಿತು ಚರ್ಚಿಸಲಾಗುವುದು. ಆಸಕ್ತರು ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯ ವ್ಯವಸ್ಥೆ ಕುರಿತ ಅಹವಾಲುಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT