<p><strong>ವಿಜಯಪುರ:</strong>ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹ 3.76 ಲಕ್ಷ ನಿವ್ವಳ ಲಾಭ ಬಂದಿದೆ. ರೈತರಿಗೆ ಶೇ 2.59ರಷ್ಟು ಬೋನಸ್ ನೀಡಲಾಗುತ್ತದೆ ಎಂದು ಡೇರಿ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.</p>.<p>ಚನ್ನರಾಯಪಟ್ಟಣ ಹೋಬಳಿಯ ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘವು ಎಲ್ಲರ ಸಹಕಾರದಿಂದ ಉತ್ತಮವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಭಾಂಗಣ ನಿರ್ಮಾಣ ಮಾಡಲಾಗುವುದು. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಹಾಲು ಉತ್ಪಾದಕರ ಸಹಕಾರ ಹಾಗೂ ಸಿಬ್ಬಂದಿ ಬದ್ಧತೆಯಿಂದ ಸಂಘ ಅಭಿವೃದ್ಧಿಯಾಗಲಿದೆ ಎಂದರು.</p>.<p>ಬೆಂಗಳೂರು ಪೂರ್ವ ಶಿಬಿರ ಕಚೇರಿಯ ವಿಸ್ತರಣಾಧಿಕಾರಿ ಕೆ.ಎಸ್. ಹನುಮಂತಪ್ಪ ಮಾತನಾಡಿ, ಕೋವಿಡ್ನಿಂದ ಹಾಲು ಮಾರಾಟ ಕಡಿಮೆಯಾಗಿದ್ದು, ಇದಕ್ಕಾಗಿ ರೈತರಿಂದ ಖರೀದಿ ಮಾಡುವ ಹಾಲಿಗೆ ₹ 1.50 ಬೆಲೆ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ದಿನಕ್ಕೆ ಸುಮಾರು 17 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದ್ದು, 10 ಲಕ್ಷ ಲೀಟರ್ ಮಾತ್ರ ಮಾರಾಟವಾಗುತ್ತಿದೆ. 7 ಲಕ್ಷ ಲೀಟರ್ ಉಳಿಯುತ್ತಿದ್ದು, ಇದರಿಂದ ಹಾಲಿನ ಪುಡಿ ಹಾಗೂ ಇತರೆ ಆಹಾರ ಪದಾರ್ಥಗಳು ತಯಾರಾಗುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಳವಾಗಲಿದೆ ಎಂದು ಹೇಳಿದರು.</p>.<p>ಕೃಷಿ ಅಧಿಕಾರಿ ಶ್ವೇತಾ ಮಾತನಾಡಿ, ರಾಸುಗಳಿಗೆ ಸರಿಯಾದ ಪ್ರಮಾಣದಲ್ಲಿ ಪಶು ಆಹಾರ ನೀಡಬೇಕು. ಮಳೆಗಾಲದಲ್ಲಿ ಹಸಿ ಮೇವು, ಒಣ ಮೇವು ನೀಡಿದರೆ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂಂದು ಸಲಹೆ ನೀಡಿದರು.</p>.<p>ಬಮೂಲ್ ಮೂಲಕ ಸಬ್ಸಿಡಿ ದರದಲ್ಲಿ ಮೇವು ಕತ್ತರಿಸುವ ಯಂತ್ರ ನೀಡಲಾಗುತ್ತದೆ. ಆಸಕ್ತ ರೈತರು ಯಂತ್ರ ಖರೀದಿಸಬಹುದು ಎಂದರು.</p>.<p>ನಿರ್ದೇಶಕರಾದ ರಾಮಾಂಜಿನಪ್ಪ, ಎನ್. ನಂಜಪ್ಪ, ಕೆಂಪಣ್ಣ, ಬಿ. ವೆಂಕಟರಾಮಯ್ಯ, ಕೃಷ್ಣಪ್ಪ, ಮುನಿರಾಜಪ್ಪ, ರಾಮಕೃಷ್ಣಪ್ಪ, ವನಜಾಕ್ಷಮ್ಮ, ಮುನಿಯಪ್ಪ, ರಾಜಪ್ಪ, ಮಂಜುನಾಥ್, ಕಾರ್ಯದರ್ಶಿ ಕೆಂಪರಾಜು, ಹಾಲು ಪರೀಕ್ಷಕ ಮುನಿಕಾಂತಪ್ಪ, ಸಹಾಯಕ ಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹ 3.76 ಲಕ್ಷ ನಿವ್ವಳ ಲಾಭ ಬಂದಿದೆ. ರೈತರಿಗೆ ಶೇ 2.59ರಷ್ಟು ಬೋನಸ್ ನೀಡಲಾಗುತ್ತದೆ ಎಂದು ಡೇರಿ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.</p>.<p>ಚನ್ನರಾಯಪಟ್ಟಣ ಹೋಬಳಿಯ ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘವು ಎಲ್ಲರ ಸಹಕಾರದಿಂದ ಉತ್ತಮವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಭಾಂಗಣ ನಿರ್ಮಾಣ ಮಾಡಲಾಗುವುದು. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಹಾಲು ಉತ್ಪಾದಕರ ಸಹಕಾರ ಹಾಗೂ ಸಿಬ್ಬಂದಿ ಬದ್ಧತೆಯಿಂದ ಸಂಘ ಅಭಿವೃದ್ಧಿಯಾಗಲಿದೆ ಎಂದರು.</p>.<p>ಬೆಂಗಳೂರು ಪೂರ್ವ ಶಿಬಿರ ಕಚೇರಿಯ ವಿಸ್ತರಣಾಧಿಕಾರಿ ಕೆ.ಎಸ್. ಹನುಮಂತಪ್ಪ ಮಾತನಾಡಿ, ಕೋವಿಡ್ನಿಂದ ಹಾಲು ಮಾರಾಟ ಕಡಿಮೆಯಾಗಿದ್ದು, ಇದಕ್ಕಾಗಿ ರೈತರಿಂದ ಖರೀದಿ ಮಾಡುವ ಹಾಲಿಗೆ ₹ 1.50 ಬೆಲೆ ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ದಿನಕ್ಕೆ ಸುಮಾರು 17 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದ್ದು, 10 ಲಕ್ಷ ಲೀಟರ್ ಮಾತ್ರ ಮಾರಾಟವಾಗುತ್ತಿದೆ. 7 ಲಕ್ಷ ಲೀಟರ್ ಉಳಿಯುತ್ತಿದ್ದು, ಇದರಿಂದ ಹಾಲಿನ ಪುಡಿ ಹಾಗೂ ಇತರೆ ಆಹಾರ ಪದಾರ್ಥಗಳು ತಯಾರಾಗುತ್ತಿವೆ. ಬೇಸಿಗೆ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಳವಾಗಲಿದೆ ಎಂದು ಹೇಳಿದರು.</p>.<p>ಕೃಷಿ ಅಧಿಕಾರಿ ಶ್ವೇತಾ ಮಾತನಾಡಿ, ರಾಸುಗಳಿಗೆ ಸರಿಯಾದ ಪ್ರಮಾಣದಲ್ಲಿ ಪಶು ಆಹಾರ ನೀಡಬೇಕು. ಮಳೆಗಾಲದಲ್ಲಿ ಹಸಿ ಮೇವು, ಒಣ ಮೇವು ನೀಡಿದರೆ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂಂದು ಸಲಹೆ ನೀಡಿದರು.</p>.<p>ಬಮೂಲ್ ಮೂಲಕ ಸಬ್ಸಿಡಿ ದರದಲ್ಲಿ ಮೇವು ಕತ್ತರಿಸುವ ಯಂತ್ರ ನೀಡಲಾಗುತ್ತದೆ. ಆಸಕ್ತ ರೈತರು ಯಂತ್ರ ಖರೀದಿಸಬಹುದು ಎಂದರು.</p>.<p>ನಿರ್ದೇಶಕರಾದ ರಾಮಾಂಜಿನಪ್ಪ, ಎನ್. ನಂಜಪ್ಪ, ಕೆಂಪಣ್ಣ, ಬಿ. ವೆಂಕಟರಾಮಯ್ಯ, ಕೃಷ್ಣಪ್ಪ, ಮುನಿರಾಜಪ್ಪ, ರಾಮಕೃಷ್ಣಪ್ಪ, ವನಜಾಕ್ಷಮ್ಮ, ಮುನಿಯಪ್ಪ, ರಾಜಪ್ಪ, ಮಂಜುನಾಥ್, ಕಾರ್ಯದರ್ಶಿ ಕೆಂಪರಾಜು, ಹಾಲು ಪರೀಕ್ಷಕ ಮುನಿಕಾಂತಪ್ಪ, ಸಹಾಯಕ ಆಂಜಿನಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>