ರೈತ ಮುಖಂಡ ದೇವರಾಜಪ್ಪ ಮಾತನಾಡಿ, ₹ 1.99 ಕೋಟಿಯ ಈ ಯಂತ್ರಕ್ಕೆ ಈಗ ಕೃಷಿ ಇಲಾಖೆಯಿಂದ ₹ 48,500 ಸಹಾಯಧನ ಸಿಗುತ್ತಿದೆ. ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರು ಸಹಾಯಧನವನ್ನು ಶೇ 90ಕ್ಕೆ ಹೆಚ್ಚಿಸಲು ಒತ್ತಾಯಿಸಿದ್ದೇವೆ. ಸಿಗುವ ಆಶಾಭಾವನೆಯಿದೆ. ಸುಲಭವಾಗಿ ಬಳಸಬಹುದಾದ ಈ ಯಂತ್ರವನ್ನು ಹಿಪ್ಪುನೇರಳೆ ಕಟಾವಲ್ಲದೆ, ರಾಗಿ, ಜೋಳವನ್ನು ಕತ್ತರಿಸಲೂ ಬಳಕೆ ಮಾಡಿಕೊಳ್ಳಬಹುದು. ತಂತ್ರಜ್ಞಾನದ ಬಳಕೆ ಅವಶ್ಯಕತೆಯಾಗಿದೆ ಎಂದರು.