ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಬಿ.ಪಿ.ಮುದ್ದುಕೃಷ್ಣೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೋಟೆ ಸಿದ್ದರಾಮಯ್ಯ, ಮುಖಂಡರುಗಳಾದ ಚಂದ್ರಸಾಗರ್, ಎಂ.ಎಸ್. ಕೇಶವಮೂರ್ತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕದ ತಾಲ್ಲೂಕು ಅಧ್ಯಕ್ಷ ಮತ್ತಿಕೆರೆ ಹನುಮಂತಯ್ಯ, ಮಂಗಳವಾರಪೇಟೆ ಕಿರಣ್, ವೆಂಕಟೇಶ್ ಭಾಗವಹಿಸಿದ್ದರು. 20 ವಾಹನಗಳಲ್ಲಿ 150ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಮನೆಮನೆ ಭೇಟಿ ಮಾಡಿದರು.