<p><strong>ಆನೇಕಲ್: </strong>ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ರಕ್ಷಣೆಗಾಗಿ ಒಗ್ಗೂಡಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಯುವಕರಿಗೆ, ವಿದ್ಯಾರ್ಥಿಗಳಿಗೆ ಅವರ ಚಿಂತನೆಗಳ ಪುಸ್ತಕಗಳನ್ನು ವಿತರಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ.ವೈ.ಚಿಕ್ಕಹಾಗಡೆ ತಿಳಿಸಿದರು.</p>.<p>ಅವರು ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಬಿಎಸ್ಪಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನದಲ್ಲಿ ಮಾತನಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಸಮಾಜವನ್ನು ಸೃಷ್ಟಿ ಮಾಡಬೇಕೆಂಬ ದೃಷ್ಟಿಯಿಂದ ಸಂವಿಧಾನದಲ್ಲಿ ಜಾತ್ಯತೀತತೆ, ಸಮಾನತೆಯ ತತ್ವಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಈ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು ಇವುಗಳ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಎಲ್ಲ ಶೋಷಿತರ ಹಾಗೂ ಎಲ್ಲ ವರ್ಗಗಳ ದನಿಯಾಗಿ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸಿದ ಅಂಬೇಡ್ಕರ್ ಅವರು ಮಹಾನ್ ಚೇತನ ಎಂದರು.</p>.<p>ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ, ತಾಲ್ಲೂಕು ಉಸ್ತುವಾರಿ ಶಂಭಪ್ಪ, ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿ ಮುನೀರ್ ಭಾಷ, ಮುಖಂಡರಾದ ಕುಮಾರ್, ಷಣ್ಮುಗ, ವಿನ್ಸಂಟ್ ಪ್ರಭಾಕರ್, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ರಕ್ಷಣೆಗಾಗಿ ಒಗ್ಗೂಡಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಯುವಕರಿಗೆ, ವಿದ್ಯಾರ್ಥಿಗಳಿಗೆ ಅವರ ಚಿಂತನೆಗಳ ಪುಸ್ತಕಗಳನ್ನು ವಿತರಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ.ವೈ.ಚಿಕ್ಕಹಾಗಡೆ ತಿಳಿಸಿದರು.</p>.<p>ಅವರು ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಬಿಎಸ್ಪಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನದಲ್ಲಿ ಮಾತನಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಸಮಾಜವನ್ನು ಸೃಷ್ಟಿ ಮಾಡಬೇಕೆಂಬ ದೃಷ್ಟಿಯಿಂದ ಸಂವಿಧಾನದಲ್ಲಿ ಜಾತ್ಯತೀತತೆ, ಸಮಾನತೆಯ ತತ್ವಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಈ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು ಇವುಗಳ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಎಲ್ಲ ಶೋಷಿತರ ಹಾಗೂ ಎಲ್ಲ ವರ್ಗಗಳ ದನಿಯಾಗಿ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸಿದ ಅಂಬೇಡ್ಕರ್ ಅವರು ಮಹಾನ್ ಚೇತನ ಎಂದರು.</p>.<p>ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ, ತಾಲ್ಲೂಕು ಉಸ್ತುವಾರಿ ಶಂಭಪ್ಪ, ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿ ಮುನೀರ್ ಭಾಷ, ಮುಖಂಡರಾದ ಕುಮಾರ್, ಷಣ್ಮುಗ, ವಿನ್ಸಂಟ್ ಪ್ರಭಾಕರ್, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>