<p><strong>ಹೊಸಕೋಟೆ</strong>: ರಾಜ್ಯ ಬಜೆಟ್ನಲ್ಲಿ ಐದು ಸಾವಿರ ವಸತಿರಹಿತ ಪೌರ ಕಾರ್ಮಿಕರಿಗೆ ₹ 300 ಕೋಟಿ ವೆಚ್ಚದಡಿ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿರುವ ಪೌರ ಆಸರೆ ಯೋಜನೆಯು ಅತೀವ ಸಂತೋಷ ತಂದಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್<br />ತಿಳಿಸಿದ್ದಾರೆ.</p>.<p>ಕೆಎಸ್ಎಸ್ಐಡಿಸಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರ್ಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್ನ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಆಯವ್ಯಯದಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ. ಉದ್ಯೋಗಾವಕಾಶ ಮತ್ತು ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದು<br />ಹೇಳಿದ್ದಾರೆ.</p>.<p>ಬಜೆಟ್ನಲ್ಲಿ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ಹೆಚ್ಚಿಸಿದ್ದಾರೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಲು ₹ 3,500 ಕೋಟಿಯನ್ನು ಆವರ್ತ ನಿಧಿಗೆ ಒದಗಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಅತಿಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಸ್ಥಾಪಿಸಿದ ಕೀರ್ತಿ ಮುಖ್ಯಮಂತ್ರಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ರಾಜ್ಯ ಬಜೆಟ್ನಲ್ಲಿ ಐದು ಸಾವಿರ ವಸತಿರಹಿತ ಪೌರ ಕಾರ್ಮಿಕರಿಗೆ ₹ 300 ಕೋಟಿ ವೆಚ್ಚದಡಿ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿರುವ ಪೌರ ಆಸರೆ ಯೋಜನೆಯು ಅತೀವ ಸಂತೋಷ ತಂದಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್<br />ತಿಳಿಸಿದ್ದಾರೆ.</p>.<p>ಕೆಎಸ್ಎಸ್ಐಡಿಸಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರ್ಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್ನ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಆಯವ್ಯಯದಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ. ಉದ್ಯೋಗಾವಕಾಶ ಮತ್ತು ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದು<br />ಹೇಳಿದ್ದಾರೆ.</p>.<p>ಬಜೆಟ್ನಲ್ಲಿ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ಹೆಚ್ಚಿಸಿದ್ದಾರೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಲು ₹ 3,500 ಕೋಟಿಯನ್ನು ಆವರ್ತ ನಿಧಿಗೆ ಒದಗಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಅತಿಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಸ್ಥಾಪಿಸಿದ ಕೀರ್ತಿ ಮುಖ್ಯಮಂತ್ರಿಗೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>