<p><strong>ಆನೇಕಲ್:</strong> ‘ಓಮೈಕ್ರಾನ್ ರೂಪಾಂತರ ತಳಿಯ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಗಿ ಕ್ರಮಕೈಗೊಂಡಿದ್ದು ಗಡಿ ಭಾಗದಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.</p>.<p>ಆನೇಕಲ್ನ ಗಡಿಭಾಗವಾದ ಅತ್ತಿಬೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ಆರ್ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದ್ದು, ಪ್ರತಿದಿನ 3 ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು.</p>.<p>ತಾಲ್ಲೂಕಿನಲ್ಲಿ 130 ಕೊರೊನಾ ಸಕ್ರಿಯ ಪ್ರಕರಣಗಳಿವೆ. 72 ಮಂದಿಯನ್ನು ಹೋಮ್ ಐಸೋಲೇಷನ್ಗೆ ಒಳಪಡಿಸಲಾಗಿದೆ. 58 ಮಂದಿಯನ್ನು ಆಸ್ಪತ್ರೆ ಮತ್ತು ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನಾದ್ಯಂತ ಲಸಿಕೆಗೆ ವೇಗ ನೀಡಲು ಕ್ರಮವಹಿಸಲಾಗಿದೆ. ಡಿ. 10ರೊಳಗೆ ತಾಲ್ಲೂಕಿನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 2ನೇ ಡೋಸ್ ನೀಡಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಲಸಿಕೆ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಹೆಚ್ಚಿಸಿ ಪ್ರತಿಯೊಬ್ಬರು ಲಸಿಕೆ ಪಡೆಯಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ‘ಓಮೈಕ್ರಾನ್ ರೂಪಾಂತರ ತಳಿಯ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಗಿ ಕ್ರಮಕೈಗೊಂಡಿದ್ದು ಗಡಿ ಭಾಗದಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದರು.</p>.<p>ಆನೇಕಲ್ನ ಗಡಿಭಾಗವಾದ ಅತ್ತಿಬೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ಆರ್ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದ್ದು, ಪ್ರತಿದಿನ 3 ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು.</p>.<p>ತಾಲ್ಲೂಕಿನಲ್ಲಿ 130 ಕೊರೊನಾ ಸಕ್ರಿಯ ಪ್ರಕರಣಗಳಿವೆ. 72 ಮಂದಿಯನ್ನು ಹೋಮ್ ಐಸೋಲೇಷನ್ಗೆ ಒಳಪಡಿಸಲಾಗಿದೆ. 58 ಮಂದಿಯನ್ನು ಆಸ್ಪತ್ರೆ ಮತ್ತು ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನಾದ್ಯಂತ ಲಸಿಕೆಗೆ ವೇಗ ನೀಡಲು ಕ್ರಮವಹಿಸಲಾಗಿದೆ. ಡಿ. 10ರೊಳಗೆ ತಾಲ್ಲೂಕಿನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 2ನೇ ಡೋಸ್ ನೀಡಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಲಸಿಕೆ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಹೆಚ್ಚಿಸಿ ಪ್ರತಿಯೊಬ್ಬರು ಲಸಿಕೆ ಪಡೆಯಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>