ಬಸ್ ವಿಜಯಪುರಕ್ಕೆ ಬಂದಾಗ ಅಕ್ಕಪಕ್ಕ ಕುಳಿತಿದ್ದ ಪ್ರಯಾಣಿಕರು, ಇಳಿಯುವಂತೆ ತಿಳಿಸಲು ಮಾತನಾಡಿಸಿದರು. ಆಗ ಅವರಿಂದ ಪ್ರತಿಕ್ರಿಯೆ ಬರಲಿಲ್ಲ. ಆಗ ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಅದಕ್ಕೂ ಪ್ರತಿಕ್ರಿಯೆ ನೀಡದ ಕಾರಣ, ಸಾರಿಗೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಬಸ್ಸಿನ ನಿರ್ವಾಹಕ ಬಸ್ ಅನ್ನು ಪೊಲೀಸ್ ಠಾಣೆ ಮುಂದೆ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದರು.