ಸ್ಥಳಕ್ಕೆ ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ರಮೇಶ್, ‘ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಲಾಗಿನ್ ವರ್ಕ್ ಆಗುತ್ತಿಲ್ಲ. ಕುಟುಂಬಸ್ಥರನ್ನು ಕಳೆದುಕೊಂಡವರ ನೋವಿನಲ್ಲಿ ನಾವು ಕೂಡ ಭಾಗಿಯಾಗಿದ್ದೇವೆ. ಗ್ರಾಮ ಪಂಚಾಯಿತಿಯಿಂದ ಸರ್ಕಾರಕ್ಕೆ ಪತ್ರ ಬರೆದು ಶೀಘ್ರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸಲಾಗುವುದು. ಜನರ ಹಿತ ಕಾಪಾಡಲು ಗ್ರಾಮ ಪಂಚಾಯಿತಿ ಬದ್ಧವಾಗಿದ್ದು, ನಿಮ್ಮೊಟ್ಟಿಗೆ ನಾನು ಕೂಡ ಹೋರಾಟದಲ್ಲಿ ಭಾಗಿಯಾಗುತ್ತೇನೆ’ ಎಂದು ಸಮಧಾನ ಪಡಿಸಿದರು. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.