<p>ಸರ್ಜಾಪುರ (ಆನೇಕಲ್): ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿರುವ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. </p>.<p>ಎಬಿವಿಪಿ ಪ್ರತಿಭಟನೆಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಲಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ವಿಶ್ವವಿದ್ಯಾಲಯದ ಆವರಣದಲ್ಲಿ 50ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆಗಳನ್ನು ಕೂಗುತ್ತಾ ಒಳನುಗ್ಗಲು ಪ್ರಯತ್ನಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಸಂಘವು (ಎಐಎಸ್ಎ) ದೇಶವಿರೋಧಿ ಚಿಂತನೆಯ ಕಾರ್ಯಕ್ರಮ ನಡೆಸುತ್ತಿದೆ. ಆ ಕಾರ್ಯಕ್ರಮಗಳಿಗೆ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ವೇದಿಕೆ ಕಲ್ಪಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.</p>.<p>ವಿದ್ಯಾಸಂಸ್ಥೆಗಳು ಜ್ಞಾನಾರ್ಜನೆಯ ಕೇಂದ್ರ ಆಗಬೇಕು. ಆದರೆ, ಪ್ರತಿಷ್ಠಿತ ವಿದ್ಯಾಸಂಸ್ಥೆಗಳೇ ದೇಶವಿರೋಧಿ ಚಟುವಟಿಕೆಗಳ ತಾಣವಾಗಿ ನಿರ್ಮಾಣ ಆಗುತ್ತಿವೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. </p>.<p>ಆನೇಕಲ್ ಪೊಲೀಸ್ ಉಪ ವಿಭಾಗದಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ನಡೆ ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಸಂಘದ (ಎಐಎಸ್ಎ) ಸದಸ್ಯರು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು. ಎಬಿವಿಪಿ ವಿರುದ್ಧ ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರ್ಜಾಪುರ (ಆನೇಕಲ್): ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿರುವ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. </p>.<p>ಎಬಿವಿಪಿ ಪ್ರತಿಭಟನೆಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಲಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.</p>.<p>ವಿಶ್ವವಿದ್ಯಾಲಯದ ಆವರಣದಲ್ಲಿ 50ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆಗಳನ್ನು ಕೂಗುತ್ತಾ ಒಳನುಗ್ಗಲು ಪ್ರಯತ್ನಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಸಂಘವು (ಎಐಎಸ್ಎ) ದೇಶವಿರೋಧಿ ಚಿಂತನೆಯ ಕಾರ್ಯಕ್ರಮ ನಡೆಸುತ್ತಿದೆ. ಆ ಕಾರ್ಯಕ್ರಮಗಳಿಗೆ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ವೇದಿಕೆ ಕಲ್ಪಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.</p>.<p>ವಿದ್ಯಾಸಂಸ್ಥೆಗಳು ಜ್ಞಾನಾರ್ಜನೆಯ ಕೇಂದ್ರ ಆಗಬೇಕು. ಆದರೆ, ಪ್ರತಿಷ್ಠಿತ ವಿದ್ಯಾಸಂಸ್ಥೆಗಳೇ ದೇಶವಿರೋಧಿ ಚಟುವಟಿಕೆಗಳ ತಾಣವಾಗಿ ನಿರ್ಮಾಣ ಆಗುತ್ತಿವೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. </p>.<p>ಆನೇಕಲ್ ಪೊಲೀಸ್ ಉಪ ವಿಭಾಗದಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ನಡೆ ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಸಂಘದ (ಎಐಎಸ್ಎ) ಸದಸ್ಯರು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು. ಎಬಿವಿಪಿ ವಿರುದ್ಧ ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>