<p><strong>ದೊಡ್ಡಬಳ್ಳಾಪುರ:</strong> ಕಸಬಾ ವ್ಯಾಪ್ತಿಯ ರಾಜಸ್ವ ನಿರೀಕ್ಷಕ (ಆರ್ಐ) ಲಕ್ಷ್ಮೀನರಸಿಂಹ ಅವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಡಿವೈಎಸ್ಪಿ ಜಗದೀಶ್ ನೇತೃತ್ವದ 29 ಜನರ ತಂಡ ನಗರದಲ್ಲಿನ ಕುಚ್ಚಪ್ಪನ ಪೇಟೆಯಲ್ಲಿರುವ ಲಕ್ಷ್ಮೀನರಸಿಂಹ ಅವರ ಮನೆಗೆ ಬೆಳಿಗ್ಗೆ 6ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ.</p>.<p>ಲಕ್ಷ್ಮೀನರಸಿಂಹ ಅವರು ಸುಮಾರು 15 ವರ್ಷಗಳಿಂದ ನಗರ ಹಾಗೂ ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p>ಎಸಿಬಿ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹ ಅವರ ಮನೆಯಲ್ಲಿ ಚಿನ್ನ, ಬೆಳ್ಳಿ, ನಗದು ಹಾಗೂ ಜಮೀನು, ಮನೆಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಲಕ್ಷ್ಮೀನರಸಿಂಹ ಅವರ ಕಚೇರಿ ಸೇರಿದಂತೆ 4 ಕಡೆಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಕಸಬಾ ವ್ಯಾಪ್ತಿಯ ರಾಜಸ್ವ ನಿರೀಕ್ಷಕ (ಆರ್ಐ) ಲಕ್ಷ್ಮೀನರಸಿಂಹ ಅವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಡಿವೈಎಸ್ಪಿ ಜಗದೀಶ್ ನೇತೃತ್ವದ 29 ಜನರ ತಂಡ ನಗರದಲ್ಲಿನ ಕುಚ್ಚಪ್ಪನ ಪೇಟೆಯಲ್ಲಿರುವ ಲಕ್ಷ್ಮೀನರಸಿಂಹ ಅವರ ಮನೆಗೆ ಬೆಳಿಗ್ಗೆ 6ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ.</p>.<p>ಲಕ್ಷ್ಮೀನರಸಿಂಹ ಅವರು ಸುಮಾರು 15 ವರ್ಷಗಳಿಂದ ನಗರ ಹಾಗೂ ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p>ಎಸಿಬಿ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹ ಅವರ ಮನೆಯಲ್ಲಿ ಚಿನ್ನ, ಬೆಳ್ಳಿ, ನಗದು ಹಾಗೂ ಜಮೀನು, ಮನೆಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಲಕ್ಷ್ಮೀನರಸಿಂಹ ಅವರ ಕಚೇರಿ ಸೇರಿದಂತೆ 4 ಕಡೆಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>