ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಬಾ-2 ವ್ಯಾಪ್ತಿಯ ಆರ್‌ಐ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ, ದಾಖಲೆ ವಶ

Last Updated 24 ನವೆಂಬರ್ 2021, 9:06 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕಸಬಾ-2 ವ್ಯಾಪ್ತಿಯ ರಾಜಸ್ವ ನಿರೀಕ್ಷಕರಾಗಿ(ಆರ್ಐ) ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀನರಸಿಂಹ ಇವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಡಿವೈಎಸ್ಪಿ ಜಗದೀಶ್ ನೇತೃತ್ವದ 29 ಜನರ ತಂಡ ನಗರದಲ್ಲಿನ ಕುಚ್ಚಪ್ಪನಪೇಟೆಯಲ್ಲಿರುವ ಲಕ್ಷ್ಮೀನರಸಿಂಹ ಅವರ ಮನೆಗೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ.

ಆರ್‌ಐ ಲಕ್ಷ್ಮೀನರಸಿಂಹ
ಆರ್‌ಐ ಲಕ್ಷ್ಮೀನರಸಿಂಹ

ಲಕ್ಷ್ಮೀನರಸಿಂಹ ಅವರು ಸುಮಾರು 15 ವರ್ಷಗಳಿಂದಲು ನಗರ ಹಾಗೂ ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ಪ್ರಸ್ತುತ ರಾಜಸ್ವ ನಿರೀಕ್ಷಕರಾಗಿ ಕತ್ಯವ್ಯ ನಿರ್ವಹಿಸುತ್ತಿದ್ದರಾರೆ.

ಎಸಿಬಿ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹ ಅವರ ಮನೆಯಲ್ಲಿನ ಚಿನ್ನ,ಬೆಳ್ಳಿ,ನಗರದು ಹಾಗೂ ಜಮೀನು,ಮನೆಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಲಕ್ಷ್ಮೀನರಸಿಂಹ ಅವರ ಕಚೇರಿ ಸೇರಿದಂತೆ 4 ಕಡೆಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT