<p><strong>ವಿಜಯಪುರ:ಪ</strong>ಟ್ಟಣದ ಪ್ರಗತಿ ಆಂಗ್ಲ ಶಾಲಾ ಆವರಣದಲ್ಲಿ ಗುರುವಾರ ಸದ್ಭಾವನಾ ದಿನ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಮುಖ್ಯಶಿಕ್ಷಕ ಜೆ.ಎನ್. ಪ್ರಕಾಶ್ ಮಾತನಾಡಿ, ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾಗಿದೆ. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಹೆಸರಿನಲ್ಲಿ ಒಡೆದು ಹೋಗುತ್ತಿರುವ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಯ ಮೂಲ ಉದ್ದೇಶವಾಗಿದೆ ಎಂದರು.</p>.<p>ದೇಶದ ಪ್ರತಿಯೊಬ್ಬ ಪ್ರಜೆಯು ಈ ಗುಣವನ್ನು ತನ್ನಲ್ಲಿ ಅಳವಡಿಸಿಕೊಂಡರೆ ಭಾರತ ವಿಶ್ವದಲ್ಲಿಯೇ ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.</p>.<p>ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವೂ ಹೌದು. ತಮ್ಮ ಆಡಳಿತಾವಧಿಯಲ್ಲಿ ರಾಷ್ಟ್ರೀಯ ಸೌಹಾರ್ದತೆಗೆ ಶ್ರಮಿಸಿದ ಅವರಿಗೆ ಗೌರವ ನೀಡುವ ಸಲುವಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ಸದ್ಭಾವನಾ ದಿನವನ್ನಾಗಿ ಆಚರಿಸಲು ಆಗಿನ ಕಾಂಗ್ರೆಸ್ ಸರ್ಕಾರ ನಿರ್ಧರಿಸಿತ್ತು. ಈ ಆಚರಣೆ ಈಗಲೂ ಮುಂದುವರಿದಿದೆ ಎಂದರು.</p>.<p>ಈ ದಿನ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಕೆಲವು ಸಂಘ–ಸಂಸ್ಥೆಗಳು, ಜನರು ಗಿಡಗಳನ್ನು ನೆಡುವ ಮೂಲಕವೂ ಈ ದಿನವನ್ನು ಆಚರಿಸುತ್ತಾರೆ ಎಂದರು.</p>.<p>ಶಿಕ್ಷಕಿಯರಾದ ಮಮತಾ ಜಿ.ಇ., ಶ್ರಾವಣಿ ಎಂ., ಉಷಾ ಜಿ. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:ಪ</strong>ಟ್ಟಣದ ಪ್ರಗತಿ ಆಂಗ್ಲ ಶಾಲಾ ಆವರಣದಲ್ಲಿ ಗುರುವಾರ ಸದ್ಭಾವನಾ ದಿನ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಮುಖ್ಯಶಿಕ್ಷಕ ಜೆ.ಎನ್. ಪ್ರಕಾಶ್ ಮಾತನಾಡಿ, ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾಗಿದೆ. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಹೆಸರಿನಲ್ಲಿ ಒಡೆದು ಹೋಗುತ್ತಿರುವ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಯ ಮೂಲ ಉದ್ದೇಶವಾಗಿದೆ ಎಂದರು.</p>.<p>ದೇಶದ ಪ್ರತಿಯೊಬ್ಬ ಪ್ರಜೆಯು ಈ ಗುಣವನ್ನು ತನ್ನಲ್ಲಿ ಅಳವಡಿಸಿಕೊಂಡರೆ ಭಾರತ ವಿಶ್ವದಲ್ಲಿಯೇ ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.</p>.<p>ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವೂ ಹೌದು. ತಮ್ಮ ಆಡಳಿತಾವಧಿಯಲ್ಲಿ ರಾಷ್ಟ್ರೀಯ ಸೌಹಾರ್ದತೆಗೆ ಶ್ರಮಿಸಿದ ಅವರಿಗೆ ಗೌರವ ನೀಡುವ ಸಲುವಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ಸದ್ಭಾವನಾ ದಿನವನ್ನಾಗಿ ಆಚರಿಸಲು ಆಗಿನ ಕಾಂಗ್ರೆಸ್ ಸರ್ಕಾರ ನಿರ್ಧರಿಸಿತ್ತು. ಈ ಆಚರಣೆ ಈಗಲೂ ಮುಂದುವರಿದಿದೆ ಎಂದರು.</p>.<p>ಈ ದಿನ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಕೆಲವು ಸಂಘ–ಸಂಸ್ಥೆಗಳು, ಜನರು ಗಿಡಗಳನ್ನು ನೆಡುವ ಮೂಲಕವೂ ಈ ದಿನವನ್ನು ಆಚರಿಸುತ್ತಾರೆ ಎಂದರು.</p>.<p>ಶಿಕ್ಷಕಿಯರಾದ ಮಮತಾ ಜಿ.ಇ., ಶ್ರಾವಣಿ ಎಂ., ಉಷಾ ಜಿ. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>