ಅಪಘಾತದ ವೇಳೆ ಕಾರಿನಲ್ಲಿದ್ದಗಿರೀಶ್, ರಮೇಶ್, ಮಂಜುನಾಥ್, ಅಶೋಕ ಹಾಗೂ ರಘುನಾಥರೆಡ್ಡಿ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೊಸಕೋಟೆ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಚಾಲಕ ನಿರ್ಲಕ್ಷ್ಯದಿಂದ ಕಾರು ಓಡಿಸಿದ್ದೇ ಅಪಘಾತಕ್ಕೆ ಕಾರಣವೆಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.