<p><strong>ದೊಡ್ಡಬಳ್ಳಾಪುರ: </strong>ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಗ್ಗುವಾರಿಪಲ್ಲಿ ಸಮೀಪ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. </p>.<p>ಕಂಟನಕುಂಟೆಯಿಂದ ತಿರುಪತಿಗೆ ಹೊರಟಿದ್ದ ಕಾರಿನ ಟೈರ್ ಸ್ಫೋಟಗೊಂಡು ಬೆಂಗಳೂರು-ಚನ್ನೈ ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಕಂಟನಕುಂಟೆ ಗ್ರಾಮದ ಗಂಗರಾಜು(50), ಲಕ್ಷ್ಮಿ(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶ್ರೀನಿವಾಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಎಲ್ಲರನ್ನೂ ಕೋಲಾರದ ಆರ್.ಎಲ್.ಜಾಲಪ್ಪ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮೃತರು ಮತ್ತು ಗಾಯಾಳುಗಳು ಸಂಬಂಧಿಗಳಾಗಿದ್ದು ತಿರುಪತಿ ಸಮೀಪದ ಸಂಬಂಧಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದಿನ ಟೈರ್ ಸ್ಫೋಟಗೊಂಡಿದ್ದರಿಂದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.</p>.<p>ಕಾರು ಚಾಲನೆ ಮಾಡುತ್ತಿದ್ದ ಗಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಬಂಧಿಗಳು ತಿಳಿಸಿದ್ದಾರೆ. ಗಂಗರಾಜು ಅಂತ್ಯಕ್ರಿಯೆ ಭಾನುವಾರ ಕಂಟನಕುಂಟೆ ಗ್ರಾಮದಲ್ಲಿ ಹಾಗೂ ಲಕ್ಷ್ಮಿ ಅಂತ್ಯಕ್ರಿಯೆ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆಯಲಿದೆ.</p>.<p>ಬೆಂಗಳೂರು– ಚಿತ್ತೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಹಾಗೂ ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಗ್ಗುವಾರಿಪಲ್ಲಿ ಸಮೀಪ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. </p>.<p>ಕಂಟನಕುಂಟೆಯಿಂದ ತಿರುಪತಿಗೆ ಹೊರಟಿದ್ದ ಕಾರಿನ ಟೈರ್ ಸ್ಫೋಟಗೊಂಡು ಬೆಂಗಳೂರು-ಚನ್ನೈ ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಕಂಟನಕುಂಟೆ ಗ್ರಾಮದ ಗಂಗರಾಜು(50), ಲಕ್ಷ್ಮಿ(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶ್ರೀನಿವಾಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಎಲ್ಲರನ್ನೂ ಕೋಲಾರದ ಆರ್.ಎಲ್.ಜಾಲಪ್ಪ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮೃತರು ಮತ್ತು ಗಾಯಾಳುಗಳು ಸಂಬಂಧಿಗಳಾಗಿದ್ದು ತಿರುಪತಿ ಸಮೀಪದ ಸಂಬಂಧಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದಿನ ಟೈರ್ ಸ್ಫೋಟಗೊಂಡಿದ್ದರಿಂದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.</p>.<p>ಕಾರು ಚಾಲನೆ ಮಾಡುತ್ತಿದ್ದ ಗಂಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಬಂಧಿಗಳು ತಿಳಿಸಿದ್ದಾರೆ. ಗಂಗರಾಜು ಅಂತ್ಯಕ್ರಿಯೆ ಭಾನುವಾರ ಕಂಟನಕುಂಟೆ ಗ್ರಾಮದಲ್ಲಿ ಹಾಗೂ ಲಕ್ಷ್ಮಿ ಅಂತ್ಯಕ್ರಿಯೆ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆಯಲಿದೆ.</p>.<p>ಬೆಂಗಳೂರು– ಚಿತ್ತೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಹಾಗೂ ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>