<p><strong>ದೊಡ್ಡಬಳ್ಳಾಪುರ: </strong>ತುಮಕೂರು-ದೊಡ್ಡಬಳ್ಳಾಪುರ ರಸ್ತೆಯ ಮೇಷ್ಟ್ರುಮನೆ ಕ್ರಾಸ್ ಸಮೀಪ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಸ್ಕೂಟರ್ ಮತ್ತುಲಾರಿಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ಕು ಮಂದಿ ಬೈಕ್ ಸವಾರರು ಮೃತಪಟ್ಠಿದ್ದಾರೆ.</p>.<p>ಮೃತರನ್ನು ತಾಲ್ಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದ ಸತೀಶ್ (60), ಶಾಂತಮ್ಮ(50), ಅಜ್ಜನಕಟ್ಟೆ ಗ್ರಾಮದ ನರಸಿಂಹಮೂರ್ತಿ(35), ಮಂಜುನಾಥ್(30) ಎಂದು ಗುರುತಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಸ್ಕೂಟರ್ಗಳು ದೊಡ್ಡಬಳ್ಳಾಪುರ ಕಡೆಯಿಂದ ತುಮಕೂರು ಕಡೆಗೆ ಚಲಿಸುತ್ತಿದ್ದವು. ಲಾರಿ ತುಮಕೂರು ಕಡೆಯಿಂದ ಬರುತ್ತಿತ್ತು.</p>.<p><strong>ಸಾವಿನಲ್ಲೂ ಒಂದಾದ ತಂದೆ- ಮಗ,ಸೊಸೆ</strong></p>.<p>ಭಾನುವಾರ ಮಧ್ಯಾಹ್ನ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸತೀಶ್ (60) ಅವರ ತಂದೆ ಚಿಕ್ಕಬಚ್ಚೇಗೌಡ (95) ಅವರು ಭಾನುವಾರ ರಾತ್ರಿ ನಿಧನ ಹೊಂದಿದ್ದಾರೆ.</p>.<p>ಸುಮಾರು ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಚಿಕ್ಕಬಚ್ಚೇಗೌಡರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಾವಿನಲ್ಲೂ ಸಹ ತಂದೆ ಮಗ ಒಂದಾಗಿದ್ದಾರೆ. ಮೃತರಿಗೆ ಭಾನುವಾರ ನಿಧನ ಹೊಂದಿರುವ ಸತೀಶ್ ಸೇರಿದಂತೆ 4 ಜನ ಪುತ್ರರು, ಮೂರು ಜನ ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಮಗ, ಸೊಸೆಯೊಂದಿಗೆ ಮಂಗಳವಾರ ಗಡ್ಡಂಬಚ್ಚಹಳ್ಳಿಯಲ್ಲಿ ಗ್ರಾಮದಲ್ಲೇ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತುಮಕೂರು-ದೊಡ್ಡಬಳ್ಳಾಪುರ ರಸ್ತೆಯ ಮೇಷ್ಟ್ರುಮನೆ ಕ್ರಾಸ್ ಸಮೀಪ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಸ್ಕೂಟರ್ ಮತ್ತುಲಾರಿಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ಕು ಮಂದಿ ಬೈಕ್ ಸವಾರರು ಮೃತಪಟ್ಠಿದ್ದಾರೆ.</p>.<p>ಮೃತರನ್ನು ತಾಲ್ಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದ ಸತೀಶ್ (60), ಶಾಂತಮ್ಮ(50), ಅಜ್ಜನಕಟ್ಟೆ ಗ್ರಾಮದ ನರಸಿಂಹಮೂರ್ತಿ(35), ಮಂಜುನಾಥ್(30) ಎಂದು ಗುರುತಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಸ್ಕೂಟರ್ಗಳು ದೊಡ್ಡಬಳ್ಳಾಪುರ ಕಡೆಯಿಂದ ತುಮಕೂರು ಕಡೆಗೆ ಚಲಿಸುತ್ತಿದ್ದವು. ಲಾರಿ ತುಮಕೂರು ಕಡೆಯಿಂದ ಬರುತ್ತಿತ್ತು.</p>.<p><strong>ಸಾವಿನಲ್ಲೂ ಒಂದಾದ ತಂದೆ- ಮಗ,ಸೊಸೆ</strong></p>.<p>ಭಾನುವಾರ ಮಧ್ಯಾಹ್ನ ದಾಬಸ್ಪೇಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸತೀಶ್ (60) ಅವರ ತಂದೆ ಚಿಕ್ಕಬಚ್ಚೇಗೌಡ (95) ಅವರು ಭಾನುವಾರ ರಾತ್ರಿ ನಿಧನ ಹೊಂದಿದ್ದಾರೆ.</p>.<p>ಸುಮಾರು ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಚಿಕ್ಕಬಚ್ಚೇಗೌಡರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಾವಿನಲ್ಲೂ ಸಹ ತಂದೆ ಮಗ ಒಂದಾಗಿದ್ದಾರೆ. ಮೃತರಿಗೆ ಭಾನುವಾರ ನಿಧನ ಹೊಂದಿರುವ ಸತೀಶ್ ಸೇರಿದಂತೆ 4 ಜನ ಪುತ್ರರು, ಮೂರು ಜನ ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಮಗ, ಸೊಸೆಯೊಂದಿಗೆ ಮಂಗಳವಾರ ಗಡ್ಡಂಬಚ್ಚಹಳ್ಳಿಯಲ್ಲಿ ಗ್ರಾಮದಲ್ಲೇ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>